ಧಾರವಾಡ | ಶರಣರ ನೆನಹು ಒಂದು ದಿನಕ್ಕೆ ಮಾತ್ರ ಸೀಮಿತವಾಗದಿರಲಿ: ಶಾಕೀರ್ ಸನದಿ

Date:

Advertisements

ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.

ಏ.2ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ವಚನಕಾರ ದೇವರ ದಾಸಿಮಯ್ಯನವರ ವಚನಗಳು ಪ್ರತಿಯೊಬ್ಬರ ಮನೆಮನೆಗೂ ಮುಟ್ಟುವ ವ್ಯವಸ್ಥೆ ಆಗಬೇಕು. ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದರು.

ಧಾರವಾಡ ಜಿಲ್ಲಾ ದೇವಾಂಗ ಸಂಘ ಅಧ್ಯಕ್ಷ ಡಾ. ಕೆ.ಜಿ. ಬ್ಯಾಕೋಡಿ ಮಾತನಾಡಿ, 10ನೇ ಶತಮಾನದಲ್ಲಿ ಆದ್ಯ ವಚನಕಾರ ದೇವರ ದಾಸಿಮಯ್ಯನವರ ನಂತರ ಸಾಕಷ್ಟು ಶರಣರು ಬರುತ್ತಾರೆ. ಬಸವಣ್ಣನವರು ವಚನಗಳನ್ನು ಅತ್ಯಂತ ಸರಳ ಭಾಷೆಯಲ್ಲಿ ಬರೆದಿದ್ದಾರೆ. ಆದರೆ ದಾಸಿಮಯ್ಯನವರ ವಚನಗಳು ತಿಳಿಯಬೇಕಾದರೆ; ಕನ್ನಡ, ಹಳಗನ್ನಡದ ಬಗ್ಗೆ ಜ್ಞಾನವಿರಬೇಕಾಗುತ್ತದೆ.

Advertisements

ಜಗದೀಶ ಜವಳಿ ಮಾತನಾಡಿ, ದಾಸಿಮಯ್ಯನವರ ಆಧುನಿಕತೆ ಮತ್ತು ಪ್ರಭಾವವು ನಮ್ಮ ಇಂದಿನ ಸಮಾಜದಲ್ಲೂ ಪ್ರಸ್ತುತವಾಗಿವೆ. ಜಾತಿ-ಮತ ಭೇದ, ಅಸಹಿಷ್ಣುತೆ, ಮತ್ತು ಅಸಮಾನತೆಯನ್ನು ನಿವಾರಿಸಲು ಅವರ ಸಂದೇಶಗಳು ನಮಗೆ ಪಾಠವಾಗಬೇಕು. ಶ್ರಮ ಮತ್ತು ಪ್ರಾಮಾಣಿಕತೆಯಿಂದ ಬದುಕಿದರೆ ದೇವರ ಅನುಗ್ರಹ ದೊರೆಯುತ್ತದೆ ಎಂಬ ಅವರ ತತ್ವ ಸದಾ ಪ್ರೇರಣಾದಾಯಕವಾಗಿದೆ ಎಂದರು.

ರಾಣೆಬೆನ್ನೂರ ನಿವೃತ್ತ ಪ್ರೌಢಶಾಲಾ ಶಿಕ್ಷಕ ಎಸ್.ಕೆ.ದುರ್ಗದಸೀಮಿ ದೇವರ ದಾಸಿಮಯ್ಯ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈರಣ್ಣ ಇಂಜಿನಗೇರಿ ಕಾರ್ಯಕ್ರಮ ನಿರೂಪಿಸಿದರು. ರವಿ ಡೊಳ್ಳಿ ವಂದಿಸಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಅಜಿತ್ ದೇಸಾಯಿ, ಧಾರವಾಡ ದೇವಾಂಗ ಸಂಘ ಅಧ್ಯಕ್ಷ ವಿನೋದ ಹುಲಿಮನಿ, ಬೆಂಗಳೂರು ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರ ಪಾಟೀಲ, ಧಾರವಾಡ ದೇವಾಂಗ ನೇಕಾರ ಅಭಿವೃದ್ದಿ ಸಂಘದ ಅಧ್ಯಕ್ಷ ರವಿ ಲೋಲೆ, ಬನಶಂಕರಿ ದೇವಾಂಗ ಸಂಘದ ಅಧ್ಯಕ್ಷ ಬಸವರಾಜ ಕೊಂಗಿ, ಬಸವರಾಜ ಕುಸುಬಿ, ಸಮಾಜದ ಮುಖಂಡ ರಾಮು ತಾರೆನ್ನವರ ಮತ್ತು ಉಪ್ಪಿನ ಬೆಟಗೇರಿ ಸಮಾಜದ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X