ಧಾರವಾಡ | ಹಿಜಾಬ್‌ಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ʼಧರ್ಮ ದಂಗಲ್‌ʼ ಪದ ಬಳಕೆ; ಸಚಿವ ಸಂತೋಷ್ ಲಾಡ್‌ ಗರಂ‌ 

Date:

Advertisements

ಹಿಜಾಬ್‌ ಹಾಗೂ ಇತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ʼಧರ್ಮ ದಂಗಲ್‌ʼ ಎಂಬ ಪದ ಬಳಸುತ್ತಿವೆ. ಅದು ದಂಗಲ್‌ ಹೇಗೆ ಆಗುತ್ತದೆ. ಸಿಎಂ ಹೇಳಿರುವುದು ಕಾನೂನಾತ್ಮಕವಾಗಿದೆ. ಅದಕ್ಕೆ ದಂಗಲ್‌ ಎಂಬ ಪದ ಬಳಸಿ ಏಕೆ ಹೇಳುತ್ತಿರಿ? ಎಂದು ಮಾಧ್ಯಮಗಳ ವಿರುದ್ಧ ಸಚಿವ ಸಂತೋಷ್ ಲಾಡ್‌ ಗರಂ‌ ಆದರು.

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್‌ ಪ್ರತಿಕ್ರಿಯೆ ನೀಡಿ ಮಾತನಾಡಿದರು.

“ಧರ್ಮ ದಂಗಲ್‌ ಎಂದರೇನು? ಅದರಲ್ಲಿ ಧರ್ಮ ದಂಗಲ್‌ ಏನಾಗಿದೆ? ಪದೇ ಪದೆ ಮಾಧ್ಯಮಗಳು ಧರ್ಮ ದಂಗಲ್‌ ಎಂಬ ಪದ ಬಳಸುತ್ತಿವೆ. ಇದು ಎಷ್ಟು ಸರಿ? ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಆದೇಶ ವಾಪಸ್‌ ಪಡೆಯಲು ಅವಕಾಶವಿದೆ. ಅದರಲ್ಲಿ ಸಿಎಂ ತಪ್ಪೇನಿದೆ? ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ ಮಾಡಲಿ” ಎಂದರು.

Advertisements

“ನಾನೂ ಒಬ್ಬ ಹಿಂದೂ ಅಲ್ಲವಾ? ನಾನೇನು ಅದಕ್ಕೆ ವಿರೋಧ ಮಾಡುತ್ತಿಲ್ಲ. ಮಾಧ್ಯಮದಲ್ಲೂ ಹಿಂದೂಗಳಿದ್ದಾರೆ ಅವರೂ ವಿರೋಧ ಮಾಡುತ್ತಾರಾ? ನಿಮ್ಮ ನಿಲುವು ಏನು” ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

“ಮುಸ್ಲಿಂ ತುಷ್ಟೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದವರು ಮುಸ್ಲಿಂ ತುಷ್ಟೀಕರಣ ಎಂಬುದು ವಿರೋದ ಪಕ್ಷಗಳ ದೃಷ್ಟಿಕೋನವಾಗಿದೆ. ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ʼ ಎಂದರೇನು? ಹಿಂದೂ, ಮುಸ್ಲಿಂ, ಸಿಖ್‌, ಬುದ್ಧ ಎಲ್ಲರನ್ನೂ ಒಂದೇ ರೀತಿ ನೋಡಿಕೊಳ್ಳುತೇವೆ ಎಂಬುದಲ್ಲವೇ?” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೋಟಿಸ್ ಜಾರಿ

“ಹಿಜಾಬ್‌ ನಿಷೇಧ ಹಿಂಪಡೆಯುವುದು ಸೇರಿದಂತೆ ಇತರೆ ನಿಯಮಗಳನ್ನು ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕು ಅಂತಿದೆಯೋ ಅದೇ ರೀತಿ ಮಾಡುತ್ತಾರೆ. ಅದೇ ರೀತಿಯಲ್ಲಿ ಮಾಡಲು ಸಿಎಂ ಪರಿಶೀಲಿಸುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X