ಧಾರವಾಡ | ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಯ್ಕೆ ಚುನಾವಣಾ ಗಿಮಿಕ್: ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ

Date:

Advertisements

ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆ ಜರುಗುವ ನಿಟ್ಟಿನಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ತನ್ನತ್ತ ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯ ಘಟಕಕ್ಕೆ ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಂತ್ರಗಾರಿಕೆ ರೂಪಿಸಿದೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಅವರು ಮಾತನಾಡಿದರು.  “ಹಿಂದಿನ ಬಿಜೆಪಿ ಆಡಳಿತದಲ್ಲಿ ಲಿಂಗಾಯತ ಸಮಾಜದಲ್ಲಿ ಹಿರಿಯಣ್ಣನಂತಿರುವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದೆ, ಪಂಚಮಸಾಲಿ ಸಮಾಜವನ್ನು ಮೀಸಲಾತಿಯಿಂದ ದೂರವಿಟ್ಟು ಅಲಕ್ಷ್ಯ ಮಾಡಿದ್ದನ್ನು ಪಂಚಮಸಾಲಿಗರು ಇನ್ನೂ ಮರೆತಿಲ್ಲ. ಹೀಗಿರುವಾಗ ವಿಜಯೇಂದ್ರರನ್ನು ನೇಮಕ ಮಾಡುವ ಮೂಲಕ ಲಿಂಗಾಯತರ ಮತ ಬೇಟೆಗೆ ಹೊರಟಿರುವ ಬಿಜೆಪಿ ಸಾಧನೆ ಫಲ ಕೊಡಲಾರದು” ಎಂದು ಅವರು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಇನ್ನಾದರೂ ಕುಟುಂಬ ರಾಜಕಾರಣದ ಕುರಿತು ಮಾತನಾಡುವುದನ್ನು ನಿಲ್ಲಿಸಬೇಕು: ಆಯನೂರ್‌ ಮಂಜುನಾಥ್

Advertisements

ಗಂಗಾಧರ ದೊಡ್ಡವಾಡ ಈ ದಿನ.ಕಾಮ್ ಜತೆಗೆ ಮಾತನಾಡಿ, “ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ಡಾ. ಈಶ್ವರ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿ ಡಿ ಜತ್ತಿ, ನಿಜಲಿಂಗಪ್ಪ, ಎಸ್ ಆರ್ ಕಂಠಿ, ವೀರೇಂದ್ರ ಪಾಟೀಲ್‌ರಂತಹ ನಾಲ್ಕು ಜನ ಮೇಧಾವಿಗಳನ್ನು ಮುಖ್ಯಮಂತ್ರಿ ಮತ್ತು ಉಪರಾಷ್ಟ್ರಪತಿ ಸ್ಥಾನದವರೆಗೆ ಕಳುಹಿಸಿ ಕಾಂಗ್ರೆಸ್ ಗೌರವಿಸಿದ್ದನ್ನು ಲಿಂಗಾಯತರು ಮರೆತಿಲ್ಲ. ಹೀಗಿರುವಾಗ ಲಿಂಗಾಯತರನ್ನು ತನ್ನತ್ತ ಸೆಳೆಯಲು ಬಿಜೆಪಿ ಏನೇ ತಂತ್ರಗಾರಿಕೆ ರೂಪಿಸಿದರೂ ಅದು ಯಶಸ್ಸು ಕಾಣಲಾಗದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X