ಧಾರವಾಡ | ಮತದಾನ ಜಾಗೃತಿ ಕಾರ್ಯಕ್ರಮ

Date:

Advertisements

ಧಾರವಾಡದ ಅಲಿ ಪಬ್ಲಿಕ್ ಶಾಲೆಯ ಹಾಗೂ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ ಶಾಖೆಯ ವತಿಯಿಂದ ಆಯೋಜಿಸಲ್ಪಟ್ಟ ಕಾರ್ಯಗಾರದಲ್ಲಿ ಡಾ. ಎನ್ ಬಿ ನಾಲತವಾಡ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ರಾಷ್ಟ್ರೀಯ ಮತದಾನದ ದಿನದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೇಷ್ಮಾ ಸೋನೆ ಖಾನ್ ಮಾತನಾಡಿ, ಸಂವಿಧಾನ ಮತ್ತು ಮತದಾನದ ಕುರಿತ ಕಾರ್ಯಗಾರವು ನಮ್ಮ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸಾಕಷ್ಟು ಜ್ಞಾನವನ್ನು ಒದಗಿಸಿದೆ ಎಂದು ಸಂತಸಪಟ್ಟರು.

ಮೊಹಮ್ಮದ್ ಅಫಜಲ್ ಎ.ಎಮ್.ಪಿ’ಯ ಧ್ಯೇಯ ಉದ್ದೇಶಗಳನ್ನು ಮತ್ತು ರಾಷ್ಟ್ರೀಯ ಭಾವೈಕ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಧಾರವಾಡದ ಎ.ಎಮ್.ಪಿ’ಯ ಚಾಪ್ಟರಿನ ಮುಖ್ಯಸ್ಥ ಡಾಕ್ಟರ್ ಮುಸದ್ಧಿಕಾ ಖಾನಂ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ಮಾಹಿತಿ ನೀಡುತ್ತ ಮೂಲಭೂತ ಹಕ್ಕುಗಳ ಬಗ್ಗೆ ತಿಳಿಸಿದರು.

Advertisements

ಕುರಾನ್ ಪಠಣದೊಂದಿಗೆ ವಿದ್ಯಾರ್ಥಿ ಮೊಹಮ್ಮದ್ಅಲಿ ಕುಂಬಿ ಕಾರ್ಯಕ್ರಮ ಆರಂಭವಾಯಿತು. ಕುಮಾರ ತನ್ವೀರ್ ಅಲ್ಮೆಲ್, ಹಬೀಬಾ ಕಾಂಟ್ರಾಕ್ಟರ್ ಮತ್ತು ಶಾಫಿನ್ ಸುಂಕದ ಕಾರ್ಯಕ್ರಮದ ಕುರಿತು ಪ್ರಶಂಸೆ ಮಾಡುತ್ತಾ ಇಂತಹ ಕಾರ್ಯಕ್ರಮಗಳು ಮೇಲಿಂದ ಮೇಲೆ ಅಯೋಜಿಸಬೇಕೆಂದು ಅನಿಸಿಕೆ ಹಂಚಿಕೊಂಡರು.

ಮಾರೂಫಾ ಇನಾಮ್ದಾರ್ ಕಾರ್ಯಕ್ರಮ ನಿರೂಪಿಸಿದರು. ಮಾಡಿದರು. ಜೈತುನಬಿ ಬಲಬಟ್ಟಿ ವಂದಿಸಿದರು. ಕಾರ್ಯಗಾರದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X