ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಠಾಣೆಗೆ ಕರೆಸಿ ಹೊಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೊಲೀಸ್ ಇನ್ಸ್ಪೆಕ್ಟರ್ ಓರ್ವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
“ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ ಕಳಿಸುತ್ತೇನೆ, ಸುಮ್ಮನೆ ಬಿಡಲ್ಲ. ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ” ಎಂದು ಧಾರವಾಡ ಶಹರ ಠಾಣೆ ಇನ್ಸ್ಪೆಕ್ಟರ್ ಕಾಡದೇವರಮಠ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಶಿರಾಜನ ಕಾಯಕ ಭೂಮಿ ಪುನಶ್ಚೇತನಕ್ಕೆ ಕೆಆರ್ಎಸ್ ಪಕ್ಷ ಆಗ್ರಹ
ಧಾರವಾಡ ಶಹರ ಠಾಣೆ ಇನ್ಸ್ಪೆಕ್ಟರ್ ಎನ್ ಸಿ ಕಾಡದೇವರಮಠ ಅವರನ್ನು ಮನೆಗೆ ಕರೆಸಿದ್ದ ಕೇಂದ್ರ ಸಚಿವರು, “ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ, ನಾವೂ ಅಧಿಕಾರಕ್ಕೆ ಬರುತ್ತೇವೆ. ಎಚ್ಚರಿಕೆಯಿಂದ ಇರಿ” ಎಂದು ಸಂಸದ ಪ್ರಲ್ಹಾದ್ ಕಿಡಿಕಾರಿದ್ದಾರೆ.