ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 4 ತಿಂಗಳಿಂದ ವೇತನ ಸಿಗದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಿ, ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ ಉಮಾದೇವಿ ಒತ್ತಾಯಿಸಿದರು.

- Advertisement -

ಧಾರವಾಡ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜಿಲ್ಲೆಯಾದ್ಯಂತ ಮಕ್ಕಳ ಆರೋಗ್ಯದ ವಿಷಯವಾಗಲಿ ಅಥವಾ ಅವರಿಗೆ ಪೌಷ್ಠಿಕ ಆಹಾರ ತಲುಪಿಸುವ ವಿಷಯವಾಗಿರಲಿ ಕಳೆದ 50 ವರ್ಷಗಳಿಂದ ಈ ದಿಶೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಐಸಿಡಿಎಸ್ ಯೋಜನೆಯನ್ನು ಜಿಲ್ಲೆಯ ಪ್ರತಿಯೊಂದು ಮನೆಗೆ ಮುಟ್ಟಿಸಿ ಸದೃಢ ಮಕ್ಕಳನ್ನು ಬೆಳೆಸಲು ಪ್ರತಿ ಮಗುವನ್ನು ತಮ್ಮ ಮಗುವೆಂದೇ ಸಲಹುತ್ತಿರುವವರು ಇದೇ ತಾಯಂದಿರು” ಎಂದರು.

“ಇವರ ಗೋಳು-ಸಮಸ್ಯೆಗಳು ಮಾತ್ರ ಯಾರಿಗೂ ಬೇಡವಾಗಿವೆ. ಇಂದಿನ ಬೆಲೆ ಏರಿಕೆ ದಿನಗಳಲ್ಲಿ ನಾಲ್ಕು ತಿಂಗಳಿನಿಂದ ಇವರಿಗೆ ಗೌರವಧನ ಬಾರದೇ ಇವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇಂದು ನಿಯಮಿತವಾಗಿ ಸಂಬಳ ದೊರಕುವ ಸರ್ಕಾರಿ ನೌಕರರೇ ಒಂದು ತಿಂಗಳು ವೇತನ ಬರದಿದ್ದಾಗ ಪರದಾಡುವಂತಹ ಸಂಭವವಿರುವ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ನಾಲ್ಕು ತಿಂಗಳಿನಿಂದ ಇವರುಗಳು ಬದುಕನ್ನು ಹೇಗೆ ಎದುರಿಸುತ್ತಿರಬಹುದು” ಎಂದು ಪ್ರಶ್ನಿಸಿರಬಹುದು.

“ಇವರುಗಳು ಎದುರಿಸುತ್ತಿರುವ ಸಮಸ್ಯೆಗಳು ಹಲವಾರು. ಮಕ್ಕಳಿಗೆಂದು ಕೊಡುವ ಮೊಟ್ಟೆಗಳು ತಿಂಗಳ ಮೊದಲನೇ ದಿನ ಕೇಂದ್ರಕ್ಕೆ ಬರುವುದು ಬಿಟ್ಟು 15ನೇ ತಾರೀಖಿಗೆ ಬರುತ್ತವೆ. ಅದರಲ್ಲಿ ಕೊಳತಿರುವ ಮೊಟ್ಟೆಗಳು ಬರುತ್ತಿದ್ದು ಯಾವುದೇ ಗುಣಮಟ್ಟ ಇರುವುದಿಲ್ಲ. ಇನ್ನೂ ಹಲವಾರು ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ಹಲವಾರು ತಿಂಗಳ ಬಾಡಿಗೆ ಬಂದಿಲ್ಲ” ಎಂದು ಆರೋಪಿಸಿದರು.

“ಹಲವಾರು ಜ್ವಲಂತ ಸಮಸ್ಯೆಗಳಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಬಳಲುತ್ತಿದ್ದು, ಅವರ ನ್ಯಾಯಯುತ ಹಕ್ಕುಗಳನ್ನು ಪೂರೈಸನೇಕು ಎಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಧಾರವಾಡ ಜಿಲ್ಲಾ ಘಟಕದ ಕಾರ್ಯಕರ್ತೆಯರು ಆಗ್ರಹಿಸಿದರು.

“ಕಳೆದ 4 ತಿಂಗಳುಗಳಿಂದ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಐದು ತಿಂಗಳಿನಿಂದ ಬಾಕಿ ಇರುವ ತರಕಾರಿ ಬಿಲ್ಲನ್ನು ಪಾವತಿಸಬೇಕು. ಧಾರವಾಡ ಶಹರ ವೃತ್ತದಲ್ಲಿ ಕೂಡಲೇ ಬಾಕಿ ಇರುವ ಮೊಟ್ಟೆ ಬಿಲ್ ಮತ್ತು ಬಾಡಿಗೆ ಬಿಲ್ಲುಗಳನ್ನು ಕೂಡಲೇ ಪಾವತಿಸಬೇಕು. ಎಚ್‌ಎನ್‌ಎಸ್ ಸರ್ವೆಯ ₹500 ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

“ಜಿಲ್ಲೆಯಲ್ಲಿ ನಿವೃತ್ತಿ ಹೊಂದಿದ ಕಾರ್ಯಕರ್ತರಿಗೆ ಆದೇಶದಂತೆ ಇಡಿಗಂಟನ್ನು ಯಾವುದೇ ವಿಳಂಬವಿಲ್ಲದೆ ನೀಡಬೇಕು. ರಾಜ್ಯ ವ್ಯಾಪಿ ಒಂದೇ ಸಮವಸ್ತ್ರ ನೀಡಲು ಕ್ರಮ ಕೈಗೊಳ್ಳಬೇಕು. ಸೇವಾ ಹಿರಿತನದ ಆಧಾರದ ಮೇಲೆ ಅರ್ಹ ಕಾರ್ಯಕರ್ತರಿಗೆ ಮೇಲ್ವಿಚಾರಕರಾಗಲು ಮುಂಬಡ್ತಿ ನೀಡಬೇಕು. ಐಸಿಡಿಎಸ್ ಯೋಜನೆಯ ಕೆಲಸಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸಗಳನ್ನು ಕಾರ್ಯಕರ್ತೆಯರಿಗೆ ವಹಿಸಬಾರದು. ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು” ಎಂದು ಆಗ್ರಹಿಸಿದರು.

ಭುವನಾ ಬಳ್ಳಾರಿ ಜಿಲ್ಲಾ ಸಂಚಾಲಕಿ ಸೇರಿದಂತೆ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಇನ್‌ಸ್ಟಾ ರೀಲ್ಸ್‌ಗಾಗಿ ಕೈಯಲ್ಲಿ ಕತ್ತಿ ಹಿಡಿದು ಪೋಸ್; ಯುವಕ ಅರೆಸ್ಟ್‌

ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ...

ಧಾರವಾಡ | ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ, ಮೊಬೈಲ್ ಬೆಳಕಿನಲ್ಲಿಯೇ ಬಸ್ ಚಾಲನೆ

ಹುಬ್ಬಳ್ಳಿಯಿಂದ ಅತ್ತಿಗೇರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಮುಖ್ಯ ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ,...

ಧಾರವಾಡ | ತ್ವರಿತಗತಿ ಜನರ ಸಮಸ್ಯೆಗಳ ವಿಲೇವಾರಿ: ಸಚಿವ ಸಂತೋಷ ಲಾಡ್

"ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದೆ. ಆ...

ಧಾರವಾಡ | ನಗರಕ್ಕೆ ಸೆ. 7ರಂದು ಶುದ್ಧ ನೀರು ಪೂರೈಕೆ ಸ್ಥಗಿತ, ದುರಸ್ತಿ ಕಾರ್ಯ

ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ...