ಧಾರವಾಡ | ತಿಪ್ಪೆಗಳಾಗಿದ್ದ ಕೆರೆಗಳಿಗೆ ಜೀವ ಕಳೆ ತುಂಬಿದ ಸ್ಥಳೀಯರು

Date:

Advertisements

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿಯಲ್ಲಿ 17 ಎಕರೆ ವಿಸ್ತಾರದಲ್ಲಿ ಎರಡು ಕೆರೆಗಳಿವೆ. ಅವುಗಳ ಒಟ್ಟು 10 ಎಕರೆ ಕೆರೆ ಅಂಗಳ ಪಾಳು ಬಿದ್ದಿತ್ತು. ಸದ್ಯ ಗ್ರಾಮದ ದೊಡ್ಡಕೆರೆ ಮತ್ತು ಸಣ್ಣಕೆರೆಗಳು ಮತ್ತೆ ಜೀವ ಕಳೆ ಪಡೆದುಕೊಳ್ಳುತ್ತಿದೆ.

ಗ್ರಾಮಸ್ಥರ ನೆರವಿನಿಂದ ಗ್ರಾಮ ಪಂಚಾಯತಿಯವರು 13.85 ಲಕ್ಷ ರೂ. ವೆಚ್ಚದಲ್ಲಿ ಬ್ಯಾಹಟ್ಟಿಯ ಕೆರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹೂಳು ತೆಗೆದಿದ್ದಾರೆ ಎಂದು ಬ್ಯಾಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಮತ್ತು ಉಪಾಧ್ಯಕ್ಷೆ ಮಧು ಕಲ್ಲಪ್ಪ ಮಾದ್ಯಮದವರಿಗೆ ತಿಳಿಸಿದ್ದಾರೆ.

ಈ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸ ಆರಂಭವಾದ ಬಳಿಕ ಗ್ರಾಮದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿದ್ದು, ಗ್ರಾಮದಲ್ಲಿನ ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದೆ.

Advertisements

ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ಟ್ರ್ಯಾಕ್ಟರ್‌ಗಳ ಮೂಲಕ ರೈತರು ತಮ್ಮ ಜಮೀನುಗಳಿಗೆ ಹಾಕಿಕೊಳ್ಳುತ್ತಿದ್ದಾರೆ. ಒಂದೂವರೆ ತಿಂಗಳಲ್ಲಿ ಒಟ್ಟು 24 ಸಾವಿರ ಟ್ರ್ಯಾಕ್ಟರ್‌ ಮಣ್ಣು ಕೆರೆ ಅಂಗಳದಿಂದ ಎತ್ತಲಾಗಿದೆ. ಇದಕ್ಕಾಗಿ ರೈತರಿಂದ ಆಗಿರುವ ವೆಚ್ಚ 12 ಲಕ್ಷ ರೂ. ಎಂದು ಅವರು ತಿಳಿಸಿದರು.

ಸುಮಾರು 200ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ರಾತ್ರಿಯಿಂದಲೇ ಸರದಿ ನಿಂತುಕೊಂಡು ಮಣ್ಣು ತೆಗೆದುಕೊಂಡು ಹೋಗಿವೆ. 2023 ಡಿಸೆಂಬರ್‌ 5ರಿಂದ ಕೆರೆಗಳ ಹೂಳು ಎತ್ತುವ ಕೆಲಸ ಆರಂಭಿಸಲಾಗಿತ್ತು. 38 ದಿನಗಳಲ್ಲಿ ನಾಲ್ಕು ಅಡಿ ಹೂಳೆತ್ತಲಾಗಿದೆ. ದೊಡ್ಡ ಕೆರೆ ತುಂಬಿದ ಬಳಿಕ ಸಣ್ಣ ಕೆರೆಗೆ ಮಳೆನೀರು ಹಳ್ಳದ ಮೂಲಕ ಹರಿದು ಬರುವ ವ್ಯವಸ್ಥೆ ಮಾಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಮಾಡುವ ಮೊದಲು ಬ್ಯಾಹಟ್ಟಯಲ್ಲಿ 18 ರೈತರು ಒಳಗೊಂಡ ಕೆರೆ ಅಭಿವೃದ್ಧಿ ಸಮಿತಿ ರಚಿಸಲಾಗಿತ್ತು. ನಂತರ ಗ್ರಾಮ ಪಂಚಾಯಿತಿಯಿಂದ ಅನುಮೋದನೆ, ಸಹಕಾರ ಪಡೆದು, ಕೆರೆ ಹೂಳೆತ್ತಲು ಮಾತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನ ಸಹಾಯ ಮಾಡುವ ಬಗ್ಗೆ ತಿಳಿಸಿ, ಮಣ್ಣಿನ ಸಾಗಣೆ ಸ್ವಂತ ಖರ್ಚಿನಲ್ಲಿ ನಡೆಯಬೇಕು ಎಂದು ಹೇಳಿ, ಎಲ್ಲರ ಒಪ್ಪಿಗೆಯ ನಂತರ ಕಾರ್ಯಾರಂಭಿಸಿದ್ದರು ಗ್ರಾಮಸ್ಥರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X