ಧಾರವಾಡ | ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ವಿಶೇಷ ಜಾಗೃತಿ ಶಿಬಿರ

Date:

Advertisements

ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಡಾ. ಆರ್.ಬಿ ಪಾಟೀಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಭಿಮಾನ ಫೌಂಡೇಶನ್ ಒಗ್ಗೂಡಿ ಜಾಗೃತಿ ಶಿಬಿರ ನಡೆಸಿವೆ.

ಶಿಬಿರದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಹೆಸರಾಂತ ಮಾದಕವ್ಯಸನ ವಿಮುಕ್ತಿ ತಜ್ಞ ಡಾ. ಸುಧೀಂದ್ರ ಹುದ್ದಾರ ಮತ್ತು ತುರ್ತು ಔಷಧ ತಜ್ಞೆ ಡಾ.ಸೋನಾಲಿ ಪಾಟೀಲ ಯಾವಗಲ್ ಅವರು ವೈದ್ಯಕೀಯ ಚಿಕಿತ್ಸೆಯ ಮೂಲಕ ಮಾದಕ ವ್ಯಸನಗಳ ಬಗ್ಗೆ, ಅವುಗಳಿಂದ ಮುಕ್ತರಾಗುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಎಮ್.ಎಮ್ ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ವೈದ್ಯರು ಉಚಿತ ಕಣ್ಣಿನ ತಪಾಸಣೆ ನಡೆಸಿದರು. ಡಾ. ಆರ್ ಬಿ ಪಾಟೀಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ರಕ್ತದೊತ್ತಡ, ಮಧುಮೇಹ, ಕೈಕಾಲು ನೋವು, ಮಂಡಿನೋವು, ಜ್ವರ, ನೆಗಡಿ, ಮಹಿಳೆಯರ ಆರೋಗ್ಯ ಮುಂತಾದವುಗಳ ಕುರಿತು ಆರೋಗ್ಯ ತಪಾಸಣೆ ನಡೆಸಿದರು.

Advertisements

ಕಾರ್ಯಕ್ರಮದಲ್ಲಿ ಮಾತನಾಡಿದ ಆಸ್ಪತ್ರೆಯ ಡಾ. ಬಿ.ಆರ್ ಪಾಟೀಲ್, ಅಶೋಕನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುದರ್ಶನ, ಮಂಜುನಾಥ, ಹಿರಿಯ ಮುಖಂಡರಾದ ಸಿದ್ದಣ್ಣ ಮೊಗಲಿಶೆಟ್ಟರ್, ಲಕ್ಷ್ಮಣ ಬಕ್ಕಾಯ, ಡಾ.ಸಿ ತ್ಯಾಗರಾಜ್, ಡಾ.ಚವ್ಹಾಣ, ಗುರುಮೂರ್ತಿ ಬೆಂಗಳೂರು, ಗೋವಿಂದ ಬೆಲ್ಡೋಣಿ, ಸ್ವಾಭಿಮಾನ ಫೌಂಡೇಶನ್ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

Download Eedina App Android / iOS

X