ಧಾರವಾಡ | ಪ್ರಸ್ತುತ ಸಮಾಜಕ್ಕೆ ನಾರಾಯಣ ಗುರುವಿನ ತತ್ವ ಸಿದ್ದಾಂತದ ಅಗತ್ಯವಿದೆ: ಜಗದೀಶ್ ಶೆಟ್ಟರ್

Date:

ಪ್ರಸ್ತುತ ಸಮಾಜಕ್ಕೆ ನಾರಾಯಣ ಗುರುಗಳ ತತ್ವ, ಸಿದ್ದಾಂತ ಮತ್ತು ಅವರ ಗುಣಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅಭಿಪ್ರಾಯಪಟ್ಟರು.

- Advertisement -

ಧಾರವಾಡದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್: ತಮಾಷೆಯಲ್ಲ, ಮಾನಸಿಕ ಆರೋಗ್ಯದ ಮೇಲಾಗುವ ಮಾಗದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ನಾರಾಯಣ ಗುರುಗಳು ಜಾತಿ ಮತ್ತು ಧರ್ಮದ ಗುರುವಲ್ಲ. ಅವರು ಲೋಕದ ಗುರು. ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ನಾಯಕ. ಸಮಾಜದಲ್ಲಿನ ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ದಾರ್ಶನಿಕ. ಮೇಲು, ಕೀಳು ತೊಡೆದುಹಾಕಿ ಸಮಾನತೆಯ ಸಮಾಜಕ್ಕೆ ಪ್ರಯತ್ನಿಸಿದ ಗುರುಗಳು. ಸಮಾಜಕ್ಕೆ ದಾರಿ ತೋರುವ ಪ್ರಯತ್ನವನ್ನು ನಾರಾಯಣ ಗುರು ಮಾಡಿದರು” ಎಂದು ಹೇಳಿದರು.

“ದುಶ್ಚಟಗಳನ್ನು ಬಿಟ್ಟು, ಪರಿಶುದ್ಧ ಬದುಕು ನಡೆಸುವಂತೆ ಸಮಾಜಕ್ಕೆ ಸಂದೇಶ ಕೊಟ್ಟಿದ್ದಾರೆ. ಒಳ್ಳೆಯ ಶಿಕ್ಷಣ ಪಡೆದುಕೊಂಡು ಗುರುಗಳು ತೋರಿದ ದಾರಿಯಲ್ಲಿ ಸಾಗಿ ಅವರ ಹೆಸರಿಗೆ ಗೌರವ ಬರುವಂತೆ ನಡೆದುಕೊಂಡರೆ ಅದುವೇ ನಿಜವಾದ ಗುರುದಕ್ಷಿಣೆ ಆಗಿದೆ. ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು, ತಿಳಿವಳಿಕೆಯೇ ಜ್ಞಾನ, ಜ್ಞಾನದ ಆನುಭವವೇ ದೇವರು. ದೇವರನ್ನು ಹುಡುಕಬೇಡಿ, ಆತ ನಿಮ್ಮಲ್ಲಿಯೇ ಇದ್ದಾನೆಂದು ಹೇಳಿದ್ದಾರೆ. ಹಾಗಾಗಿ ಅವರು ತೋರಿದ ಮಾರ್ಗದಲ್ಲಿಯೇ ದೇವರನ್ನು ಹುಡುಕೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ ಪೊಳ್ಳು ಆಡಳಿತ, ಕಣ್ಕಟ್ಟಿನ ತಂತ್ರ ಮುಂದುವರಿಯಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ಡವಳಗಿ, ಹುಬ್ಬಳ್ಳಿ ಧಾರವಾಡ ನಾಮಧಾರಿ ಸಂಘದ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಹುಬ್ಬಳ್ಳಿ ಧಾರವಾಡ ಬಿಲ್ಲವ ಸಂಘದ ಅಧ್ಯಕ್ಷ ಆನಂದ ಪೂಜಾರಿ ಮತ್ತು ಸಮುದಾಯದ ಶಂಕರ್ ಕೊಟ್ಟಿನ, ಶ್ರೀನಾಥ ಬಿ ಐ ಈಳಿಗೆರ, ನಾಗಕಲಾಲ ಈಳಿಗೇರ, ಕುಮಾರ ಬೆಕ್ಕೇರಿ, ಆರತಿ ದೇವಶಿಖಾಮಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಮುಖಂಡರು, ಹಲವು ಸಮುದಾಯಗಳ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ನಗರಕ್ಕೆ ಸೆ. 7ರಂದು ಶುದ್ಧ ನೀರು ಪೂರೈಕೆ ಸ್ಥಗಿತ, ದುರಸ್ತಿ ಕಾರ್ಯ

ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ...

ಧಾರವಾಡ | ಸಪ್ಟೆಂಬರ್ 10 ರಂದು ಅಂಗವಿಕಲರ ಕುಂದುಕೊರತೆಗಳ ಸಭೆ

ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ...

ಧಾರವಾಡ | ಸೆ.5, 6 ರಂದು ಮೂರನೇ ಅಂತಾರಾಷ್ಟ್ರೀಯ ಐಐಟಿ ಸಮ್ಮೇಳನ

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಧಾರವಾಡದ ವತಿಯಿಂದ ಭಾರತೀಯ ಪಾರಂಪರಿಕ ಜ್ಞಾನ...

ಧಾರವಾಡ | 443 ನಿರಾಶ್ರಿತರಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ವಿನಯ್‌ ಕುಲಕರ್ಣಿ

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದ...