ಧಾರವಾಡ | ಚೆನ್ನಮ್ಮ ಜಯಂತಿ ಆಚರಿಸದ ಶಿಕ್ಷಣ ಇಲಾಖೆ; ಚೆನ್ನಮ್ಮ‌ ಸೇವಾ ಸಮಿತಿ ಆಕ್ರೋಶ

Date:

ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ‌ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ‌ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ ಕಿತ್ತೂರು ಚೆನ್ನಮ್ಮ ಸೇವಾ ಸಮಿತಿʼ ಆಗ್ರಹಿಸಿದೆ.

- Advertisement -

ತಹಸೀಲ್ದಾರ ನಿರ್ದೇಶನವನ್ನು ಪಾಲಿಸದ ಅಧಿಕಾರಿಗಳ ಮೇಲೆ ಈ ಕೂಡಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ತಹಸೀಲ್ದಾರರಿಗೆ ಅಕ್ಟೋಬರ್ 25, ಬುಧವಾರದಂದು ವಿನಂತಿಸಿಕೊಂಡಿತು. ಈ ಕುರಿತು ಕೈಕೊಳ್ಳುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಹೋರಾಟದ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈದಿನ.ಕಾಮ್ ಜೊತೆ ಮಾತನಾಡಿದ ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ, ಕುಂದಗೋಳ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆಯಲ್ಲಿ, ಸ್ವಾತಂತ್ರ್ಯ ಹೋರಾಟಕ್ಕೆ ಭದ್ರ ಬುನಾದಿ ಹಾಕಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮನ ಸ್ಮರಣಾರ್ಥ ಕಾರ್ಯಕ್ರಮವನ್ನು ಶಿಕ್ಷಣ ಕ್ಷೇತ್ರದಿಂದ ಆಚರಿಸದೇ ಇರುವುದು ದುರಂತದ ಸಂಗತಿ. ಈ ಮೂಲಕ ಚೆನ್ನಮ್ಮನ ಜಯಂತಿಯ ದಿನದಂದು ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವುದನ್ನು ನಾವು ಸಹಿಸುವುದಿಲ್ಲ. ಇಲಾಖೆಯ ಬಿಇಓ ಅವರ ನಡೆ ಉದ್ದೇಶಪೂರ್ವಕವಾಗಿದೆ ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...