ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಬೇಕೆಂಬ ಬಿಜೆಪಿಗೆ ಭಕ್ತಿಯಲ್ಲ, ಭಯೋತ್ಪಾದಕ ಮನಸ್ಥಿತಿ ಇದೆ: ಭಾಸ್ಕರ್ ಪ್ರಸಾದ್

Date:

ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

- Advertisement -

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಕೂರಿಸುತ್ತೇವೆಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಭಾಸ್ಕರ್‌ ಪ್ರಸಾದ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಬಿಜೆಪಿ ಮತ್ತು ಸಂಘ ಪರಿವಾರ ಸಮಾಜದಲ್ಲಿ ಗಲಭೆಗಳನ್ನು ಸೃಷ್ಟಿ ಮಾಡಲು ಅವಕಾಶಗಳಿಗಾಗಿ ನಿರಂತರ ತಡಕಾಟದಲ್ಲಿ ತೊಡಗಿರುತ್ತವೆ. ಅದರ ಭಾಗವಾಗಿ ಇದ್ಗಾ ಮೈದಾನಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಪಟ್ಟು ಹಿಡಿಯುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅದರಲ್ಲೂ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿನಿಂದಲೂ ಇವರ ದ್ವೇಷ ರಾಜಕಾರಣಕ್ಕೆ ಸಾಕ್ಷಿಯಾಗುತ್ತ ಬಂದಿದೆ. ಮುಸ್ಲಿಮರನ್ನು ವಿಲನ್ ಮಾಡಲು ಈ ಹಿಂದುತ್ವ ಪಡೆಗಳು ಪಾಕ್ ಧ್ವಜ ಹಾರಿಸುವ, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ ಮಾಡುವ ನೀಚ ಕಾರ್ಯಗಳನ್ನು ನಡೆಸಿರುವ ಉದಾಹರಣೆಗಳು ಸಾಕಷ್ಟಿವೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಅನುಮತಿ ನೀಡದಿದ್ದರೂ ಹುಬ್ಬಳ್ಳಿ ಇದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತಿರುತ್ತೇವೆ ಎಂಬ ಬಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ನೆಲದ ಕಾನೂನು ಧಿಕ್ಕರಿಸುವ ಮಾತುಗಳನ್ನಾಡಿದ್ದಾರೆ. ಬಿಜೆಪಿಯ ದ್ವೇಷದ ತಂತ್ರಗಳಿಗೆ ಸರ್ಕಾರ ಸೊಪ್ಪು ಹಾಕಬಾರದು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಾವುದೇ ಕಾರಣಕ್ಕೂ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸರ್ಕಾರವು ತಕ್ಷಣವೇ ಸ್ಥಾಪಿಸಬೇಕು: ಸೋಲಿಡಾರಿಟಿ ಯೂತ್ ಮೂವ್ಮೆಂಟ್

"ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ...

ಹುಬ್ಬಳ್ಳಿ | ಇನ್‌ಸ್ಟಾ ರೀಲ್ಸ್‌ಗಾಗಿ ಕೈಯಲ್ಲಿ ಕತ್ತಿ ಹಿಡಿದು ಪೋಸ್; ಯುವಕ ಅರೆಸ್ಟ್‌

ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ...

ಹುಬ್ಬಳ್ಳಿ | ದಶಕದ ಕಾಯುವಿಕೆಗೆ ತೆರೆ: ವಿಮಾನ ನಿಲ್ದಾಣದ ಬಳಿ ಆಟೋ ಸ್ಟ್ಯಾಂಡ್‌ ನಿರ್ಮಾಣಕ್ಕೆ ಅಸ್ತು

ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ನಿಗದಿತ ಆಟೋ ನಿಲ್ದಾಣ ನಿರ್ಮಾಣಕ್ಕಾಗಿ 15...

ಧಾರವಾಡ | ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ, ಮೊಬೈಲ್ ಬೆಳಕಿನಲ್ಲಿಯೇ ಬಸ್ ಚಾಲನೆ

ಹುಬ್ಬಳ್ಳಿಯಿಂದ ಅತ್ತಿಗೇರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಮುಖ್ಯ ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ,...