ಆರ್‌ಎಸ್‌ಎಸ್‌ ನಿಷೇಧ ಸಂವಿಧಾನಕ್ಕೆ ವಿರುದ್ಧ: ನಿವೃತ್ತ ನ್ಯಾ. ಸಂತೋಷ್‌ ಹೆಗ್ಡೆ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅದರ ಚಟುವಟಿಕೆಗಳು ದೇಶದ ಐಕ್ಯತೆಗೆ ಭಂಗ ತರುತ್ತವೆ ಎಂಬ ವಿಷಯ ಮತ್ತೆ ಮುನ್ನೆಲೆಗೆ ಬಂದಿವೆ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಧಾರವಾಡದಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್ ನಿಷೇಧ ಸಂವಿಧಾನಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

- Advertisement -

ಸಂಘಟನೆ ಕಟ್ಟುವ ಅವಕಾಶ ಸಂವಿಧಾನದಲ್ಲಿದೆ. ಆರ್‌ಎಸ್‌ಎಸ್‌ ನಿಷೇಧಿಸುವುದು ಸಂವಿಧಾನಕ್ಕೆ ವಿರುದ್ಧವಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್: ತಮಾಷೆಯಲ್ಲ, ಮಾನಸಿಕ ಆರೋಗ್ಯದ ಮೇಲಾಗುವ ಮಾಗದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

‘ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್‌ ನಿಷೇಧಕ್ಕೆ ಮುಂದಾಗಿದೆ ಎಂದು ಸುದ್ದಿಗಾರರು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತಾರೆ. ಆಗ ಅವರ ಆಟ ಶುರುವಾಗುತ್ತದೆ. ಒಟ್ಟಿನಲ್ಲಿ ನಿಷೇಧಿಸುವ ಆಟ ಜೋರಾಗಿದೆ ಎಂದಿದ್ದಾರೆ.

ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್‌ಎಸ್‌ಎಸ್‌ ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ಎಂದು ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 33 ಅಂಕ ನಿಗದಿ- ಭೇದಭಾವ ಹೆಚ್ಚಿಸುವ ಪಲಾಯನವಾದಿ ಹಾದಿ

ಆದರೆ ಸಂತೋಷ್‌ ಹೆಗ್ಡೆ ಅವರ ಹೇಳಿಕೆ ಸಂಘಟನೆಯ ಹಿಂದಿನ ಇತಿಹಾಸವನ್ನು ನಿರ್ಲಕ್ಷಿಸುವಂತಿದೆ. ಸಂಘಟನೆಯ ಸ್ಥಾಪಕರು ಬ್ರಿಟಿಷರೊಂದಿಗೆ ಸಹಕಾರ ನೀಡಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ ಇದ್ದುದು ಚರಿತ್ರೆಯ ಸತ್ಯ. ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಸಂಘದ ಸಂಪರ್ಕ ಆರೋಪಗಳು ಇದರ ಉದ್ದೇಶವನ್ನು ಪ್ರಶ್ನಿಸುತ್ತವೆ, ಇದು ಸಂವಿಧಾನದ ಮೂಲಭೂತ ಮೌಲ್ಯಗಳಾದ ಜಾತ್ಯತೀತತೆಗೆ ವಿರೋಧಿಯಾಗಿದೆ.

ಕರ್ನಾಟಕದ ಐಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸರ್ಕಾರಿ ಶಾಲೆಗಳು, ಕಾಲೇಜುಗಳು, ದೇವಸ್ಥಾನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು. ಸರ್ಕಾರಿ ನೌಕರರು ಈ ಸಂಘಟನೆಯಲ್ಲಿ ಪಾಲ್ಗೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ. ಅವರು ಸಂಘವನ್ನು “ವಿಷಕಾರಿ ವೈರಸ್” ಎಂದು ಕರೆದು, ಅದರ ಶಾಖೆಗಳು ಯುವ ಮನಸ್ಸುಗಳನ್ನು ವಿಷಲಿಪ್ತಗೊಳಿಸುತ್ತವೆ ಎಂದು ಆರೋಪಿಸಿದ್ದಾರೆ.

ಖರ್ಗೆ ಅವರ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿವೆ, ಇದು ಸಂಘದ ಉದ್ದೇಶದ ಬಗ್ಗೆ ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಸಂಘದ ಚಟುವಟಿಕೆಗಳು ಕೋಮು ಗಲಭೆಗಳನ್ನು ಪ್ರಚೋದಿಸುವುದು, ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದ್ದು, ಸಾಕಷ್ಟು ಕಡೆ ರುಜುವಾತಾಗಿದೆ.ಆರ್‌ಎಸ್‌ಎಸ್‌ನ ಚಟುವಟಿಕೆಗಳು ರಾಷ್ಟ್ರೀಯ ಐಕ್ಯತೆಗೆ ಬೆದರಿಕೆಯಾಗಿದ್ದು, ಇದು ಭಾರತದ ವೈವಿಧ್ಯತೆಗೆ ಧಕ್ಕೆ ತರುತ್ತದೆ ಎಂಬ ಆರೋಪಗಳನ್ನು ದೃಢಪಡಿಸುತ್ತದೆ.

ನಂತರದ ಬೆಳವಣಿಗೆಗಳಲ್ಲಿ, ಸಂಪುಟ ಸಂಭೆಯಲ್ಲಿ ಸಭೆಯಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸಲು ನಿಯಮಗಳನ್ನು ತರುವ ನಿರ್ಧಾರ ಮಾಡಿದೆ. ತಮಿಳುನಾಡು ಮಾದರಿಯನ್ನು ಅನುಸರಿಸಿ, ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ; ವಿದ್ಯಾರ್ಥಿಗಳಿಗೆ ಬಯಲೇ ಗತಿ

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ...

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...