ಮದ್ದೂರು | ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯ: ಪಿಡಿಓ ಪೂರ್ಣಿಮಾ

Date:

Advertisements

ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯವಾದದ್ದು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿ
ಪಿಡಿಒ ಪೂರ್ಣಿಮಾ ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ಗೊರವನಹಳ್ಳಿ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಮೊಬೈಲ್ ನೊಡುವ ಗೀಳು ಬೆಳೆಸಿಕೊಳ್ಳದೆ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅಧ್ಯಯನ ಶೀಲವ್ಯಕ್ತಿಯ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ” ಎಂದು ಹಿತ ನುಡಿಗಳನ್ನಾಡಿದರು.

Advertisements
IMG 20241122 WA0047 1

“ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಸರ್ಕಾರದ ಆಸಕ್ತಿಯ ಫಲವಾಗಿ ಅರಿವು ಕೇಂದ್ರಗಳಾಗಿ ಪರಿವರ್ತನೆ ಮಾಡಲಾಗಿದೆ. ಈ ಅರಿವು ಕೇಂದ್ರಗಳು ನಾಗರಿಕರು, ರೈತರು, ಸ್ವಸಹಾಯ ಸಂಘದ ಸದಸ್ಯರುಗಳಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಸೇರಿದಂತೆ ಜೀವನೊಪಾಯ ಚಟುವಟಿಕೆ ಕುರಿತು ವೃತ್ತಿ ತತ್ಸಂಬಂಧಿತ ಕುಶಲತೆ ಕುರಿತು ಮಾಹಿತಿ ನೀಡುತ್ತವೆ. ಜೊತೆಗೆ ಕೃಷಿ ಹಾಗೂ ಹವಾಮಾನ ವರದಿ, ಆಧುನಿಕ ಬೇಸಾಯ ಪದ್ದತಿಯ ಕುರಿತು ಅರಿವು ಮೂಡಿಸುವ ಚಟುವಟಿಕೆ ನಡೆಸಲಿದೆ”0 ಎಂದರು.

“ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಮಾಹಿತಿಯೂ ಈ ಡಿಜಿಟಲ್ ಲೈಬ್ರರಿಯಲ್ಲಿ ಲಭ್ಯವಿದೆ. ಗ್ರಾಮೀಣ ಜನರ ಬದುಕು ಹಸನಾಗಿಸುವಲ್ಲಿ ಶ್ರಮಿಸಲಿವೆ. ಗ್ರಂಥಾಲಯ ಸಪ್ತಾಹದ ಮೂಲಕ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

“ವಿದ್ಯಾರ್ಥಿಗಳು ಶ್ರದ್ದೆಯಿಂದ ಅಧ್ಯಯನ ಮಾಡುತ್ತ ಗ್ರಂಥಾಲಯದ ಉಪಯುಕ್ತತೆ ಪಡೆದುಕೊಳ್ಳಿ. ಬದುಕಿನಲ್ಲಿ ಇಂತಹ ಮಹನೀಯರ ಪ್ರೇರಣೆಯೊಂದಿಗೆ ಸಾಧನೆಯ ಹಾದಿಯಲ್ಲಿ ಯಶಸ್ಸು ಸಾಧಿಸಬಹುದಾಗಿದೆ” ಎಂದರು

ಅರಿವು ಕೇಂದ್ರದ ಮೇಲ್ವಿಚಾರಕ ಚನ್ನಸಂದ್ರ ವಿವೇಕ್, ರಾಷ್ಟ್ರಕವಿ ಕುವೆಂಪು, ದ ರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ ಕೃ ಗೊಕಾಕ್‌ರ ಪರಿಚಯ ಮಾಡಿಸುತ್ತ, ಅವರ ಕೃತಿಗಳ ಪರಿಚಯ ಮಾಡಿಕೊಟ್ಟರು.

ಗೊರವನಹಳ್ಳಿ ಅರಿವು ಕೇಂದ್ರದಲ್ಲಿ ನಡೆದ ಗ್ರಂಥಾಲಯ ಸಪ್ತಾಹದ ಈ ಕಾರ್ಯಕ್ರಮದಲ್ಲಿ ಗೊರವನಹಳ್ಳಿ ಶಾಲೆಯ ಮಕ್ಕಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X