ಬೀದರ್ | ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಚನ್ನಬಸವಾನಂದ ಸ್ವಾಮೀಜಿ

Date:

Advertisements

ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಅಧಿಕಾರ ಮದ ಮತ್ತು ಧನ ಮದದಿಂದ ಪಿತ್ತ ನೆತ್ತಿಗೇರಿದೆ ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಕಿಡಿಕಾರಿದರು.

ಬೀದರ್‌ನಲ್ಲಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಾಸಕ ಯತ್ನಾಳ್ ಅವರು ‘ಬಸವಣ್ಣ ಹೊಳ್ಯಾಗ್ ಹಾರಿದ್ರು’ ಎಂದು ಹೇಳಿಕೆ ನೀಡಿ ಬಸವ ಭಕ್ತರಿಗೆ ಅವಮಾನಿಸಿದ್ದಾರೆ. ಕೂಡಲೇ ಯತ್ನಾಳ್ ಬಸವ ಭಕ್ತರಲ್ಲಿ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.

ಯತ್ನಾಳ್ ಮತಿಭ್ರಮಣೆ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಹೇಳಿಕೆ ನೀಡಿದ್ದೂ ಅಲ್ಲದೇ ‘ನಾನೇ ಬಸವಣ್ಣ, ನಾನೇಕೆ ಕ್ಷಮೆ ಕೇಳಬೇಕು’ ಎಂಬ ಅಹಂಕಾರದ ಮಾತುಗಳು ಆಡುತ್ತಿರುವುದು ಎಲ್ಲ ಭಕ್ತರಿಗೆ ನೋವಾಗಿದೆ. ಹೀಗಾಗಿ ಡಿ.3ರಂದು ನಗರದಲ್ಲಿ ಯತ್ನಾಳ್ ಅವರಿಗೆ ಶಾಸಕ ಸ್ಥಾನದಿಂದ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ವಿಧಾನಸಭಾ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

Advertisements

ಬಸವ ಮಂಟಪದ ಮಾತೆ ಸತ್ಯದೇವಿ, ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ ಹಾಗೂ ಪ್ರಮುಖರಾದ ಶಿವಶರಣಪ್ಪ ಪಾಟೀಲ, ಕಾಶಪ್ಪ ಸೀತಾ, ಬಸವಂತರಾವ ಬಿರಾದಾರ, ಶಾಂತಪ್ಪ ಮುಗಳಿ, ನಿರ್ಮಲಾ ನಿಲಂಗೆ, ಮಲ್ಲಿಕಾರ್ಜುನ ಶಾಪುರ, ಸಿದ್ಧವೀರ ಸಂಗಮದ, ಸತೀಶ ಪಾಟೀಲ, ಬಸಮ್ಮ ಬಿರಾದಾರ, ಈರಮ್ಮ ಕೋರೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X