ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
“ಈ ಹಿಂದೆ ಫೆ.3 ಮತ್ತು 4 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು, ಆದರೆ ಸಮಯದ ಅಭಾವ ಹಾಗೂ ಕನ್ನಡ ಭವನದ ಉದ್ಘಾಟನೆಯ ಹಿನ್ನೆಲೆಯಲ್ಲಿ ದಿನಾಂಕವನ್ನು ಮುಂದೂಡಲಾಗಿತ್ತು. ಈ ಹಿಂದೆ ಹಲವು ಸುತ್ತಿನ ಸಭೆಗಳನ್ನು ನಡೆಸಿ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷರನ್ನಾಗಿ ಗುರುನಾಥ ಕೊಳ್ಳೂರು ಹಾಗೂ ಕೋಶಾಧ್ಯಕ್ಷರನ್ನಾಗಿ ಬಾಬು ವಾಲಿ ಅವರನ್ನು ಆಯ್ಕೆ ಮಾಡಲಾಗಿದ್ದು, ವಿವಿಧ ಉಪಸಮಿತಿಗಳನ್ನು ಸಹ ರಚಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಈಗಾಗಲೇ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರನ್ನು ಆಯ್ಕೆ ಮಾಡಲಾಗಿದ್ದು, ಸಮ್ಮೇಳನದ ಸವಿನೆನಪಿಗಾಗಿ “ಸಾಂಸ್ಕೃತಿಕ ನಾಯಕ” ಎನ್ನುವ ಸ್ಮರಣಸಂಚಿಕೆಯನ್ನೂ ಸಹ ಹೊರತರಲಾಗುತ್ತಿದ್ದು, ಸ್ಮರಣ ಸಂಚಿಕೆಯ ಸಂಪಾದಕರನ್ನಾಗಿ ಡಾ.ಬಸವರಾಜ ಬಲ್ಲೂರ ಅವರು ಈಗಾಗಲೇ ಸಂಚಿಕೆಯ ಸಿದ್ದತೆಯಲ್ಲಿದ್ದಾರೆ. ಆಸಕ್ತರು ತಮ್ಮ ಲೇಖನಗಳನ್ನು ಡಾ.ಬಸವರಾಜ ಬಲ್ಲೂರ ಅವರಿಗೆ ಕಳುಹಿಸಲು ಕೋರಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ :