ಕಲಬುರಗಿ | ಅ.5ರಂದು ಜಿಲ್ಲಾ ರೈತ ಸಮಾವೇಶ : ನಾಗೇಂದ್ರ ಥಂಬೆ

Date:

Advertisements

ರೈತರ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಬೃಹತ್ ಹೋರಾಟ ರೂಪಿಸಲು ಅಕ್ಟೋಬರ್ 5ರಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಬೆ ಹೇಳಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼರೈತ ಸಾಲಗಾರನಲ್ಲ, ಸರ್ಕಾರವೇ ರೈತರಿಗೆ ಬಾಕಿದಾರ. ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಜಗತ್ ವೃತ್ತದಿಂದ ರಂಗಮಂದಿರದವರೆಗೆ ಬೃಹತ್ ಮೆರವಣಿಗೆ ಮಾಡಲಾಗುವುದುʼ ಎಂದರು.

ಡಾ.ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸದೆ ಎಲ್ಲ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಇದುವರೆಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ಸು ಪಡೆಯದೇ ರೈತರಿಗೆ ಅನ್ಯಾಯ ಎಸಗುತ್ತಿದೆ. ಜಾನುವಾರು ಹತ್ಯೆ ಮತ್ತು ಸಂರಕ್ಷಣಾ ಕಾಯ್ದೆಯನ್ನು ವಾಪಸ್ಸು ಪಡೆಯದೇ ಮುಂದುವರೆಸುತ್ತಿದೆʼ ಎಂದರು.

Advertisements

ʼಕೇಂದ್ರ ಸರ್ಕಾರದ ವಿದ್ಯುತ್ ನೀತಿಯನ್ನು ಜಾರಿಗೆ ತರಲು ಮುಂದಾಗಿ ಕೃಷಿ ಪಂಪ್‍ ಸೆಟ್‌ ರೈತರು ಆಧಾರ್ ಲಿಂಕ್ ಮಾಡಿ ಮುಂದೆ ಸ್ಮಾರ್ಟ್ ಮೀಟರ್ ಅಳವಡಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ. ಹೊಸ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಲಕ್ಷಾಂತರ ಹೊರೆ ಅನುಭವಿಸುವ ನೀತಿಯನ್ನು ರೂಪಿಸಿದೆʼ ಎಂದು ಹೇಳಿದರು.

ಗಣಿಗಾರಿಕೆಗೆ ಅವಕಾಶ ನೀಡಿ ಗಣಿ ಸುತ್ತಮುತ್ತ ರೈತರ ಭೂಮಿಯನ್ನು ಕಸಿದುಕೊಳ್ಳುತ್ತಿದೆ. ರಾಜ್ಯದ ನಾನಾ ಕಡೆಗೆ ವ್ಯವಸಾಯ ಯೋಗ್ಯ ಭೂಮಿಯನ್ನು ಸಿ ಮತ್ತು ಡಿ ಭೂಮಿ ಎಂದು ಘೋಷಿಸಿ ರೈತರನ್ನು ಒಕ್ಕಲೆಬ್ಬಿಸಿ ಅರಣ್ಯ ಬೆಳೆಸಲು ಅರಣ್ಯ ಇಲಾಖೆಗೆ ವಹಿಸುತ್ತಿದೆ. ವಿಮಾನ ನಿಲ್ದಾಣ, ಕೈಗಾರಿಕಾ ಪ್ರದೇಶಾಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ, ಇತರೆ ಅಭಿವೃದ್ಧಿ ನೆಪದಲ್ಲಿ ಲಂಗು ಲಗಾಮಿಲ್ಲದೇ ರೈತರ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆʼ ಎಂದು ದೂರಿದರು.

ʼವಿಧಾನಸೌಧ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬರ ಮತ್ತು ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಇದುವರೆಗೂ ಕೊಟ್ಟಿಲ್ಲ. ಎರಡ್ಮೂರು ವರ್ಷಗಳು ಕಳೆದರೂ ಪ್ರಧಾನಮಂತ್ರಿ ಫಸಲ್ ಭೀಮಾ ಹಣ ರೈತರ ಖಾತೆಗೆ ಜಮಾ ಆಗಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ರೈತ ಸಂಘ ಮತ್ತಷ್ಟು ಬಲಗೊಳಿಸಿ ಚಳುವಳಿ ಬಲಿಷ್ಠಗೊಳಿಸಬೇಕಾಗಿದೆ. ಪ್ರತಿ ರೈತ ಕುಟುಂಬಕ್ಕೊಬ್ಬ ಸದಸ್ಯ- ಊರಿಗೊಬ್ಬ ಕಾರ್ಯಕರ್ತ ಎಂಬ ಉದ್ದೇಶದೊಂದಿಗೆ ಪ್ರತಿ ಹಳ್ಳಿಯಲ್ಲಿಯೂ ಸಂಘಟನೆಯನ್ನು ಕಟ್ಟಿ ಬೆಳೆಸಬೇಕಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಸ್ಥಳೀಯವಾಗಿ ದೊಡ್ಡ ಹೋರಾಟವನ್ನು ರೂಪಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆʼ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ಸೈಟು ಹಿಂದಿರುಗಿಸಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ರಾಗಿ, ಫಾತಿಮಾ ಪಟೇಲ್, ಸಿದ್ದು ಎಸ್.ಎಲ್., ಕರೆಪ್ಪ ಕರಗೊಂಡ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X