ಮಂಗಳೂರು ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿ ಈ ಸಂಬಂಧ ನಗರದ ಸರ್ಕ್ಯುಟ್ ಹೌಸ್ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
“ಮಂಗಳೂರು ನಗರದಾದ್ಯಂತ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ನಗರದ ಪ್ರಮುಖ ಜಂಕ್ಷನ್ಗಳನ್ನು ಅಲಂಕರಿಸಬೇಕು. ದಸರಾ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ತಂಡ ನಿಯೋಜಿಸಬೇಕು. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸದಾ ಲಭ್ಯವಾಗುವಂತೆ ನಿಗವಹಿಸಬೇಕು” ಎಂದ ಸಚಿವರು ಪೊಲೀಸ್ ಭದ್ರತೆಯನ್ನು ಎಲ್ಲ ಕಡೆ ಕಲ್ಪಿಸಲು ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮದ್ದೂರು | ಕೋಮುವಾದಿಗಳ ಪರ ಸರ್ಕಾರದ ಮೃದು ಧೋರಣೆಯೇ ಸಾಮರಸ್ಯ ಕದಡಲು ಕಾರಣ: ಕೃಷ್ಣೇಗೌಡ
ಸಭೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೇರಿದಂತೆ ಇತರರು ಇದ್ದರು.