ಮಂಗಳೂರು | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾಧ್ಯಕ್ಷರಾಗಿ ಎಂ. ದಿವಾಕರ್ ರಾವ್ ಬೋಳೂರು ಆಯ್ಕೆ

Date:

Advertisements

ಮೌಲ್ಯಾಧಾರಿತ ರಾಜಕೀಯದೊಂದಿಗೆ, ದೇಶದ ಕಲ್ಯಾಣ ಎಂಬ ಧ್ಯೇಯದೊಂದಿಗೆ ಪ್ರಸಕ್ತ ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ 2025-2026 ರ, ಅವಧಿಗೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷೀಯ ಚುನಾವಣೆಯು ಗಣರಾಜ್ಯ ದಿನದಂದು ಮಂಗಳೂರು ನಗರದ ಹ್ಯಾಮಿಲ್ಟನ್ ಸರ್ಕಲ್ ಬಳಿ ಇರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ, ಪಕ್ಷದ ರಾಜ್ಯ ಸಮಿತಿ ವೀಕ್ಷಕರ ಉಸ್ತುವಾರಿಯಲ್ಲಿ ಯಶಸ್ವಿಯಾಗಿ ಜರುಗಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹಿರ್ ಹುಸೇನ್ ರವರು ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದರು.

ಜಿಲ್ಲೆಯ ಎಲ್ಲೆಡೆಗಳಿಂದ ಆಗಮಿಸಿದ್ದ, ಜಿಲ್ಲಾ ಸಮಿತಿಯ ಸದಸ್ಯರಿರುವ ಪಕ್ಷದ ಕಾರ್ಯಕರ್ತರ ಮತದಾನದ ಬಳಿಕ, ಜನಪರ ಹೋರಾಟಗಾರರಾದ ಎಂ. ದಿವಾಕರ್ ರಾವ್ ಬೋಳೂರುರವರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೊಕೇಟ್ ತಾಹೀರ್ ಹುಸೇನ್ ರವರು ಘೋಷಿಸಿದರು.

Advertisements

ಪಾಧ್ಯಕ್ಷರಾಗಿ ಆಸಿಫ್ ಇಕ್ಬಾಲ್ ಮತ್ತು ಆಯೆಷಾ ಮಮ್ತಾಝ್, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಪದ್ರೆಂಗಿ, ಕಾರ್ಯದರ್ಶಿಯಾಗಿ ಮರ್ಯಮ್ ಶಹೀರಾ, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಹಾಕ್ ವಿಟ್ಲ, ಮಾಧ್ಯಮ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಕುಕ್ಕಾಜೆ, ಕೋಶಾಧಿಕಾರಿಯಾಗಿ, ಮುಹಮ್ಮದ್ ಸೈಫ್ ರವರನ್ನು ಇದೇ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

1003247915

ಈ ಕಾರ್ಯಕ್ರಮದಲ್ಲಿ ವೆಲ್ಫೇರ್ ಪಾರ್ಟಿ ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲ್ಯಾನ್, ರಾಜ್ಯ ಕಾರ್ಯದರ್ಶಿ ರಿಝ್ವಾನ್ ಹುಮನಾಬಾದ್, ರಾಜ್ಯ ಸಮಿತಿಯ ಕೋಶಾಧಿಕಾರಿಯಾಗಿರುವ ಅಬ್ದುಸ್ಸಲಾಂ ಸಿ.ಎಚ್. ಮುಂತಾದವರಾಗಿರುವ ಪಕ್ಷದ ಗಣ್ಯ ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಫಾರೂಖ್ ಅಲೇಕಲರವರು ಸ್ವಾಗತಿಸಿದರು ಹಾಗೂ ಪಕ್ಷದ ನೂತನ ಪ್ರಧಾನ ಕಾರ್ಯದರ್ಶಿ ಮುನೀರ್ ಪದ್ರೆಂಗಿ ಧನ್ಯವಾದವಿತ್ತರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X