ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

Date:

Advertisements
  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ
  • ‘ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ, ಅದಕ್ಕೆ ಆಸ್ಪದ ಕೊಡಬೇಡಿ’

ಆ ಮಂತ್ರಿಗೆ, ಈ ಮಂತ್ರಿಗೆ ಹಾಗೂ ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ. ಸಮಯದ ಮಿತಿ ಇಲ್ಲದೇ ದುಡಿಯಬೇಕು. ನೂರಕ್ಕೆ ನೂರರಷ್ಟು ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೂಚಿಸಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, “ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ. ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ” ಎಂದರು.

“ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆ ಕೆಲಸ ಮಾಡಿ. ಒಳ್ಳೆ ಹೆಸರು ಪಡೆಯಿರಿ. ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ. ಹಿಂದಿನ ಸರ್ಕಾರದಲ್ಲಿ ಬೇಕಾಬಿಟ್ಟಿಯಾಗಿ ಬೂತ್ ಲೆವೆಲ್ ಆಫೀಸರ್ ಅಂತ ಲೆಟರ್ ಕೊಟ್ರಲ್ಲ, ನಿಮಗೆ ಬುದ್ದಿ ಇರಲಿಲ್ಲವಾ?” ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

Advertisements

“ಯಾರ್‍ಯಾರು ಎಷ್ಟೆಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ಗೊತ್ತಿದೆ. ಈಗ ಬದಲಾವಣೆ ಮಾಡಿಕೊಳ್ಳಿ. ಈ ಸರ್ಕಾರ ಬದಲಾವಣೆ ತಂದಿದೆ ಎಂದು ಜನರಿಗೆ ಮನವರಿಕೆ ಆಗುವಷ್ಟರ ಮಟ್ಟಿಗೆ ಉತ್ತಮವಾಗಿ ಕೆಲಸ ಮಾಡಿ. ನಿಮ್ಮ ಹಾಗೂ ಸರ್ಕಾರದ ಗೌರವ ಉಳಿಸಿ” ಎಂದರು.

ಫೋಟೋ, ವಿಡಿಯೋ ದಾಖಲೆ ಒದಗಿಸಿ

“ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಆ ಕೆಲಸ ಆಗಿದೆ, ಅದಕ್ಕೆ ಆಗಿರುವ ಖರ್ಚು ವಿವರ, ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆ ಒದಗಿಸಬೇಕು” ಎಂದು ಸೂಚಿಸಿದರು.

“ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು ಯಥಾಸ್ಥಿತಿಯಲ್ಲಿ ತಡೆ ಹಿಡಿಯಬೇಕು. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು. ಯಾವ, ಯಾವ ಕಾಮಗಾರಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ 10 ದಿನದೊಳಗೆ ಪಟ್ಟಿ ನೀಡಬೇಕು” ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

“ಈ ಮೂಲಕ ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ. ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ. ಕಣ್ಣಲ್ಲಿ ಕಂಡಿದ್ದು ಮಾತ್ರವೇ ನಂಬಿಕೆಗೆ ಅರ್ಹ. ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ” ಎಂದರು.

“ರಸ್ತೆ ಮತ್ತಿತರ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕವೇ ಮಾಡುವುದಾದರೆ ಪಾಲಿಕೆಯಲ್ಲಿ ಎಂಜಿನಿಯರ್ ಗಳು ಇರುವುದಾದರೂ ಏಕೆ? ನಿಮ್ಮ ಕೆಲಸವನ್ನು ಬೇರೆ ಯಾರೋ ಮಾಡುವುದಾದರೆ ನೀವು ಇರುವ ಅವಶ್ಯಕತೆ ಇಲ್ಲ” ಎಂದು ಕೆಲವು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

“ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಬಾರದು. ಹಾಗೇ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ದಂಡ ಮತ್ತಿತರ ಕಾನೂನು ಕ್ರಮ ಜರುಗಿಸಬೇಕು. ಒಣ ಮತ್ತು ಹಸಿ ಕಸ ವೈಜ್ಞಾನಿಕ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು” ಎಂದರು.

“ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ. ಮಳೆ ನೀರು ಸಮಸ್ಯೆಯಿಂದ ನಮಗೆ ಮತ್ತು ನಿಮಗಿಂತ ಹೆಚ್ಚಾಗಿ ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು. ಬಿಬಿಎಂಪಿ ಸಮುದ್ರ ಇದ್ದಂತೆ. ಎಲ್ಲಿ ತೇಲುತ್ತೇವೆಯೋ, ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X