ಎಸ್‌ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್‌

Date:

ವಿಧಾನಸಭೆ ಅಧಿವೇಶನ ಆರಂಭಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು.

ಎಸ್ ಎಂ ಕೃಷ್ಣ ನಿವಾಸದ ಬಳಿ ಸುದ್ದಿಗಾರರು ಜೊತೆಗೆ ಮಾತನಾಡಿದ ಡಿಕೆಶಿ, “ವಿಧಾನಸಭೆ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡುವ ನನಗೆ ರಾಜಕೀಯವಾಗಿ ಪ್ರೋತ್ಸಾಹ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆಯುವುದು ನನ್ನ ಕರ್ತವ್ಯ” ಎಂದರು.

“ಹೀಗಾಗಿ, ಅವರ ನಿವಾಸಕ್ಕೆ ಭೇಟಿ ನೀಡಿ, ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲು ಬಂದಿದ್ದೆ. ಅವರು ‘ಬೆಂಗಳೂರು ಇತಿಹಾಸ’ವೆಂಬ ಪುಸ್ತಕ ನೀಡಿದ್ದಾರೆ. ಕೃಷ್ಣ ಅವರು ಬಹಳ ದೂರದೃಷ್ಟಿಯಿಂದ ಈ ಪುಸ್ತಕ ನೀಡಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಂಡರ್‌ಪಾಸ್‌ಗಳ ಬಗ್ಗೆ ವರದಿ ಪಡೆದು ಮುನ್ನೆಚ್ಚರಿಕೆ ವಹಿಸಬೇಕಿದೆ; ಡಿಕೆಶಿ

ಬೆಂಗಳೂರು ನಗರದ ಪ್ರಮುಖ ಅಂಡರ್‌ಪಾಸ್‌ಗಳ ಕುರಿತು ವರದಿ ತರಿಸಿಕೊಡು ಈ ಪ್ರದೇಶಗಳಲ್ಲಿ ಈ ರೀತಿ ಆಗದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ. ಪ್ರತಿಯೊಂದು ಜೀವ ಕಾಪಾಡುವುದು ನಮ್ಮ ಕರ್ತವ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಚುನಾವಣೆಯಲ್ಲಿ ಕೊಟ್ಟ ಹಣ ಹಂಚಿಲ್ಲದವರು ವಾಪಸ್ ಕೊಡಿ: ನಾರಾಯಣಗೌಡ

ಮಳೆಗೆ ಬ್ಯಾಟರಾಯನಪುರದಲ್ಲಿ 27 ವರ್ಷದ ಯುವಕ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಭಾನುವಾರ ರಾತ್ರಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಇಂತಹ ದುರ್ಘಟನೆಯ ನಡೆಯುತ್ತಿರುವುದು ದುರದೃಷ್ಟಕರ. ನಾವು ಎಲ್ಲೇ ಇದ್ದರೂ ಕಾಲುವೆಗಳ ಬಳಿ ಬಹಳ ಜಾಗೃತವಾಗಿ ಇರಬೇಕು” ಎಂದು ಸಲಹೆ ನೀಡಿದರು.

“ಹಿಂದೆ ಕೇಂದ್ರ ಸರ್ಕಾರ ನರ್ಮ್ ಯೋಜನೆ ಮೂಲಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಬಹಳ ನೆರವು ನೀಡಿದ್ದರು. ನಗರಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಎಷ್ಟರ ಮಟ್ಟಿಗೆ ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದು ನೋಡಬೇಕಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಕೊಡಗು | ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ ಬಿಜೆಪಿ ಭದ್ರಕೋಟೆಯ ಮತದಾರರು

ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಿಲುವುಗಳು ಬದಲಾಗುತ್ತಿವೆ....

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...