ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಅದರಂತೆ ಈ ಬಾರಿಯ ಚುನಾವಣೆಯಲ್ಲಿ ಬಹುಮತ ಲಭಿಸಿದೆ. ಹಲವೆಡೆ ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ಅವರು ವಿದ್ಯುತ್ ಮೀಟರ್ ಬೋರ್ಡ್ನ ಕೆಳಗೆ ಬರೆದು ಅಂಟಿಸಿರುವ ಪತ್ರವೊಂದು ವೈರಲ್ ಆಗಿದೆ. “ಮೆಸ್ಕಾಂನವರೇ, ಕ್ಷಮಿಸಿ ಜೂನ್ ತಿಂಗಳಿನಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.
ತಾವು ಪತ್ರದಲ್ಲಿ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಾಸುದೇವ ಭಟ್, “ಕಾಂಗ್ರೆಸ್ ತನ್ನ ನೇತೃತ್ವದ ಸರ್ಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಘೋಷಿಸಿತ್ತು. ಜೂನ್ನಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ಕೂಡ ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇ. 95ರಷ್ಟು ಜನ ಇದರ ಲಾಭ ಪಡೆಯಬಹುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶೇ. 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಒಬ್ಬ ಫಲಾನುಭವಿ ಎಂಬುದು ದೃಢವಾಗಿರುವುದರಿಂದ ಇನ್ನು ನಾನು ಬಿಲ್ ಮೊತ್ತ ಪಾವತಿಸಲಾರೆ” ಎಂದು ಹೇಳಿದ್ದಾರೆ.
“ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ದೂರುಗಳು ಬಂದಿಲ್ಲ. ಸದ್ಯಕ್ಕೆ ಬಿಲ್ಗಳು ಪಾವತಿಯಾಗುತ್ತಿವೆ” ಎಂದು ಮೆಸ್ಕಾಂ ಅಧೀಕ್ಷಕ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ