ಬೆಂ. ಗ್ರಾಮಾಂತರ | ಹೆಣ್ಣು ಮಗುವಿನ ಮೃತದೇಹ ಪತ್ತೆ ಪ್ರಕರಣ; ಸಂಸ್ಕಾರ ಮಾಡಲಾಗದೆ ಶವವಿಟ್ಟು ಹೋಗಿದ್ದ ಪೋಷಕರು

Date:

Advertisements

ದೊಡ್ಡಬಳ್ಳಾಪುರ ಹೊರವಲಯದಲ್ಲಿ ಮತ್ತೆಯಾಗಿದ್ದ ಹೆಣ್ಣು ಮಗುವಿನ ಮೃತದೇಹ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ ಮೃತದೇಹವನ್ನು ಮೋರಿ ಬಳಿ ಇಟ್ಟು ಹೋಗಿದ್ದರೆಂದು ತಿಳಿದುಬಂದಿದೆ.

ಮಂಗಳವಾರ ಮಗುವಿನ ಮೃತದೇಹ ದೊಡ್ಡಬಳ್ಳಾಪುರದ ಬಾಳೆಟ್ಟಿಹಳ್ಳಿ ಬಳಿ ಪತ್ತೆಯಾಗಿತ್ತು. ಮಗುವಿನ ಪೋಷಕರ ಮಾಹಿತಿ ಕಲೆ ಹಾಕಲು ಪೊಲೀಸರು ಪ್ರಯತ್ನಿಸಿದ್ದರು. ಮಗುವಿನ ಕೈಯಲ್ಲಿದ್ದ ತಾಯತವನ್ನು ಆಧರಿಸಿ ಪೋಷಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪೋಷಕರು ಉತ್ತರ ಭಾರತದ ಮೂಲದವರಾಗಿದ್ದು, ಉದ್ಯೋಗ ಹರಸಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು ಎಂದು ಹೇಳಲಾಗಿದೆ

“ಅನಾರೋಗ್ಯಕ್ಕೆ ತುತ್ತಾಗಿದ್ದ ಮಗು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಸಾವನ್ನಪ್ಪಿದ್ದ ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ, ಮೋರಿ ಬಳಿ ಮೃತದೇಹವನ್ನು ಇಟ್ಟು ಹೋಗಿದ್ದರು” ಎಂದು ತಿಳಿದುಬಂದಿದೆ.

Advertisements

ಪೋಷಕರನ್ನು ಬಿಹಾರದ ಪ್ರಮೇಶ್ ಮತ್ತು ವಿಭಾ ಕುಮಾರಿ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಅವರಿಬ್ಬರು ಒಂದು ವಾರದ ಹಿಂದಷ್ಟೇ ದೊಡ್ಡಬಳ್ಳಾಪುರಕ್ಕೆ ಬಂದು ವೀರಾಪುರ ಗ್ರಾಮದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X