ಚಿಕ್ಕಬಳ್ಳಾಪುರ | ಮೈಕ್ರೋ ಫೈನಾನ್ಸ್‌ ಹಾವಳಿಗೆ ಶಾಸಕರ ಅಭಯ

Date:

Advertisements

ಯಾರದರೂ ಮನೆ ಬಳಿ ಬಂದು ಮಹಿಳೆಯರಿಗೆ ಕಿರುಕುಳ ನೀಡಿದರೆ ಒದ್ದು ಒಳಗೆ ಹಾಕಿಸುತ್ತೇನೆ. ನೀವು ಭಯಪಡದೆ ನಿಶ್ಚಿಂತೆಯಿಂದಿರಿ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಮಹಿಳೆಯರ ಗುಂಪೊಂದಕ್ಕೆ ಅಭಯ ಹಸ್ತ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಮ್ಮ ಊರು ನಮ್ಮ ಶಾಸಕರು ಕಾರ್ಯಕ್ರಮದಲ್ಲಿ ಮುಸಲ್ಮಾನ್‌ ಮಹಿಳೆಯರ ಸ್ವಸಹಾಯ ಗುಂಪುಗಳ ಅಹವಾಲು ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.

ಶಾಸಕ 2

ಸಾಲದಾರರು(ಮೈಕ್ರೋ ಫೈನಾನ್ಸ್‌) ಯಾರೇ ಆಗಲಿ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕು. ಅದನ್ನು ಹೊರತುಪಡಿಸಿ ಮನೆ ಬಳಿ ಬಂದು ಮಹಿಳೆಯರೊಂದಿಗೆ ಅನುಚಿತವಾಗಿ ಮಾತನಾಡುವುದು, ಕಿರುಕುಳ ನೀಡುವುದು ಗೊತ್ತಾದರೆ ಕೂಡಲೇ ನನ್ನ ಗಮನಕ್ಕೆ ತನ್ನಿ. ಅಂತವರ ವಿರುದ್ಧ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಲಹೆ ನೀಡಿದರು.

Advertisements

ಇದೇ ವೇಳೆ ಮಾತನಾಡಿದ ಮಹಿಳೆಯೊಬ್ಬರು, ಸಾಲ ತೆಗೆದುಕೊಳ್ಳೂವಾಗ ಚೆನಾಗಿರುತ್ತೆ, ಕಟ್ಟುವಾಗ ಆಗಲ್ವಾ? ನಮಗೆ ಹಣ ಬೇಕು ಏನಾದರೂ ಮಾಡಿ ಕಟ್ಟಿ ಎಂದು ಅಸಭ್ಯವಾಗಿ ಮಾತುಗಳನ್ನಾಡುತ್ತಿದ್ದಾರೆ. ಗಂಡಸರು ಮನೆಗೆ ಬಾರದಂತಾಗಿದ್ದಾರೆ. ದಿನಕ್ಕೊಬ್ಬರು ಸಾಲಗಾರರು ಬರುತ್ತಿದ್ದಾರೆ. ಇದರಿಂದ ನೆಮ್ಮದಿ ಇಲ್ಲದಾಗಿದೆ ಎಂದು ದೂರಿದರು.

ಮತ್ತೋರ್ವ ಮಹಿಳೆ ಮಾತನಾಡಿ, ಐದಾರು ಜನರು ಬೆಳಗಾದರೆ ಸಾಕು ಮನೆ ಬಾಗಿಲಿಗೆ ಬರುತ್ತಿದ್ದಾರೆ. ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಸತ್ತೀದ್ದೀರಿ ಎಂದಾದರೂ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪ್ರದೀಪ್‌ ಈಶ್ವರ್ ನಡೆ, ಹಳ್ಳಿ ಜನರ ಕಡೆ

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಈ ರೀತಿ ಯಾರೇ ಕಿರುಕುಳ ನೀಡಿದರೂ, ಅಂತವರ ಮೇಲೆ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಈ ವೇಳೆ ತಹಶೀಲ್ದಾರ್‌ ಅನಿಲ್‌, ಇಒ ಮಂಜುನಾಥ್‌, ತಾಲೂಕು ಆರೋಗ್ಯ ಅಧಿಕಾರಿ ಮಂಜುಳಾ, ಸಮಾಜ ಕಲ್ಯಾಣ ಅಧಿಕಾರಿ ಶೇಷಾದ್ರಿ, ಪಿಡಿಒ ಮದ್ದರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X