ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು

Date:

  • ಸಂವಿಧಾನ ವಿರೋಧಿಗಳು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ
  • ವಿರೋಧಿಗಳನ್ನು ಅರ್ಥಮಾಡಿಕೊಳ್ಳದಿದ್ದರೆ ದಲಿತ-ಶೂದ್ರರ ಉದ್ಧಾರ ಸಾಧ್ಯವಿಲ್ಲ

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಅರಸು ಜಾರಿ ಮಾಡಿದರು” ಎಂದು ವಿವರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂವಿಧಾನ ವಿರೋಧಿಗಳಿಗೆ, ಬಡವ-ಮಧ್ಯಮ ವರ್ಗದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ. ದೇವರಾಜ ಅರಸರು‌ ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಎದೆಗಾರಿಕೆಯಿಂದ ಹಾವನೂರು ವರದಿ ಜಾರಿ ಮಾಡಿದ್ದು ಅರಸು ಅವರು” ಎಂದು ಮೆಚ್ಚುಗೆ ಸೂಚಿಸಿದರು.

ಸಿದ್ದರಾಮಯ್ಯ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಸ್ಪಷ್ಟ ತಿಳಿವಳಿಕೆ ಅಗತ್ಯ

“ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ವೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

scp/tsp ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ

“ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳಿಗೆ scp/tsp ಹಣ ಬಳಕೆ ಎಂದು ಬಿಜೆಪಿ ಭಯಾನಕ ಸುಳ್ಳು ಹೇಳುತ್ತಿದೆ. ಇದನ್ನು ನಂಬಬೇಡಿ. ದಾಖಲೆಗಳನ್ನು ನೋಡಿ ಬಿಜೆಪಿಯವರಿಗೆ ಪಾಠ ಕಲಿಸಿ” ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ...