ಬೀದರ್‌ | 137 ಗ್ರಾಮಗಳ ಕುಡಿಯುವ ನೀರು ಪೂರೈಕೆಗೆ ಸಂಪುಟ ಅಸ್ತು; ಯೋಜನೆಗೆ ರಾಜ್ಯ ಸರ್ಕಾರದಿಂದ 184 ಕೋಟಿ : ಈಶ್ವರ ಖಂಡ್ರೆ

Date:

Advertisements
ಜಲ ಜೀವನ ಮಿಷನ್ ಅಡಿ ರಾಜ್ಯ ಸರ್ಕಾರದ ಅನುದಾನವನ್ನೂ ಸಂಯೋಜಿಸಿ ಒಟ್ಟು 330 ಕೋಟಿ ರೂ. ವೆಚ್ಚದಲ್ಲಿ ಬೀದರ್ ತಾಲೂಕಿನ ಬಗದಲ್ ಮತ್ತು ಇತರೆ 104‌  ಹಾಗೂ ಚಿಟಗುಪ್ಪ ತಾಲೂಕಿನ ಮನ್ನಾಎಖೇಳಿ ಮತ್ತು ಸುತ್ತಲಿನ 32 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
“ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಬೀದರ್ ತಾಲೂಕಿನ 105 ಮತ್ತು ಚಿಟಗುಪ್ಪ ತಾಲೂಕಿನ 33 ಸೇರಿ ಒಟ್ಟು 137 ಜನವಸತಿಗಳಿಗೆ ಕೊಳವೆ ನೀರು ಸರಬರಾಜು ಯೋಜನೆ/ ಕಿರು ನೀರು ಸರಬರಾಜು ಯೋಜನೆ ಅಡಿಯಲ್ಲಿ ತೆರೆದ ಬಾವಿ/ ಕೊಳವೆ ಬಾವಿಯನ್ನು ಜಲಮೂಲವನ್ನಾಗಿ ಪರಿಗಣಿಸಿ ನೀರು ಪೂರೈಕೆ ಮಾಡಲು ಅನುಮೋದನೆ ನೀಡಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
137 ಗ್ರಾಮಗಳ ಕುಡಿಯುವ ನೀರು ಯೋಜನೆಯ ಬಂಡವಾಳ ವೆಚ್ಚ 291.20 ಕೋಟಿ ರೂ. ಮತ್ತು ಸಗಟು ವೆಚ್ಚ 38.80 ಕೋಟಿ ರೂ. ಸೇರಿ ಒಟ್ಟು ಮೊತ್ತ 330 ಕೋಟಿ ರೂ. ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಬಂಡವಾಳ ವೆಚ್ಚದ ಶೇ.50ರಷ್ಟು ಅಂದರೆ 145 ಕೋಟಿ ರೂ. ಮಾತ್ರ ಒದಗಿಸುತ್ತದೆ. ರಾಜ್ಯ ಸರ್ಕಾರ ಬಂಡವಾಳ ವೆಚ್ಚದ ಶೇ.50ರಷ್ಟು ಅಂದರೆ 145 ಕೋಟಿ ರೂ. ಜೊತೆಗೆ ಸಗಟು ನೀರಿನ ವೆಚ್ಚವಾದ 38.80 ಕೋಟಿ ರೂ. ಸೇರಿ ಒಟ್ಟು 184.40 ಕೋಟಿ ರೂ. ಭರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ನೀಡಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X