ಉಡುಪಿ | ಕಂದಾಯ ಸಚಿವರಿಗೆ ದಸಂಸ ಅಂಬೇಡ್ಕರ್ ವಾದ ಮನವಿ

Date:

Advertisements

ಉಡುಪಿಗೆ ಆಗಮಿಸಿದ್ದ ರಾಜ್ಯ ಕಂದಾಯ ಸಚಿವರಾದ ಸನ್ಮಾನ್ಯ ಕ್ರಷ್ಣ ಬೈರೇ ಗೌಡರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ನಿಯೋಗವು ಇಂದು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ ಭೂ ಸಂಬಂಧಿ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಸಂಘಟನೆಯು ನಡೆಸುತ್ತಿರುವ ದಲಿತರ ಪರ್ಯಾಯ ಕಂದಾಯ ಅದಾಲತ್ ಗಳ ಬಗ್ಗೆಯೂ ಸಚಿವರಿಗೆ ಮನವರಿಕೆ ಮಾಡಿ ಕೊಡಲಾಯಿತು.

1006448903

ಮನವಿಯಲ್ಲಿ ಏನಿದೆ ?

Advertisements

ಉಡುಪಿ ಜಿಲ್ಲೆಯಲ್ಲಿ ಪ. ಜಾತಿ ಪ. ಪಂಗಡದ ಶೇಕಡಾ 65 ರಷ್ಟು ಮಂದಿ ಇನ್ನೂ ಕೂಡ ವಸತಿ-ಭೂರಹಿತರಾಗಿರುತ್ತಾರೆ. ಜಿಲ್ಲೆಯಲ್ಲಿ ಭೂಮಿಯ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯು 10-15 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಈ ಕೆಳಗಿನ ಧೂಮಿ ಹಕ್ಕಿನ ಸಮಸ್ಯೆಗಳನ್ನು ತುರ್ತು ಕ್ರಮವಹಿಸಿ ತಾವು ಪರಿಹಾರ ಮಾಡಬೇಕಾಗಿ ಕೋರಿಕೊಳ್ಳುತ್ತೇವೆ.

1) ಉಡುಪಿ ಜಿಲ್ಲೆಯಲ್ಲಿ ಇರುವ ಡಿ.ಸಿ. ಮನ್ನಾ ಭೂಮಿಗಳನ್ನು ಅರ್ಹ ಭೂರಹಿತ ಪ.ಜಾತಿ/ಪಂಗಡದ ಸದಸ್ಯರಿಗೆ ಮರು ಹಂಚಿಕೆ ಮಾಡಬೇಕು.

2) ಅಕ್ರಮ-ಸಕ್ರಮ ಸಮಿತಿಯ ಮುಂದೆ ಇರುವ ಪ.ಜಾತಿ/ಪಂಗಡದ ಜನಗಳ ಅರ್ಜಿಗಳನ್ನು ಆದ್ಯತೆಯ ಮೇಲೆ ಕೂಡಲೇ ಇತ್ಯರ್ಥಪಡಿಸಿ ಅವರಿಗೆ ಭೂ ಮಂಜೂರಾತಿಯನ್ನು ನೀಡಬೇಕು.

3) ಭೂ ಕಂದಾಯ ಅಧಿನಿಯಮ 94ಸಿ, 94ಸಿಸಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟರ ಬಾಕಿ ತಿರಸ್ಕೃತ ಅರ್ಜಿಗಳನ್ನು ಸೂಕ್ತ ಕ್ರಮಗಳ ಮೂಲಕ ಪರಿಶೀಲಿಸಿ ಅವರಿಗೇ ಅವರು ವಾಸ್ತವ್ಯ ಹೊಂದಿರುವ ಭೂಮಿಗಳ ಹಕ್ಕು ಪತ್ರ ವಿತರಣೆ ಮಾಡಬೇಕು.

4) ಜಿಲ್ಲೆಯಲ್ಲಿ ಮಂಜೂರಾತಿ ಪಡೆದು, ಪಹಣಿ ಪತ್ರವನ್ನು ಹೊಂದಿರುವ ಪರಿಶಿಷ್ಟರ ಭೂಮಿಗಳು ಇನ್ನೂ ಕೂಡ ಇತರ ಬಲಿಷ್ಠ ಸಮುದಾಯಗಳ ಸ್ವಾಧೀನತೆಯಲ್ಲಿ ಇದೆ. ಇಂತಹ ಭೂಮಿಗಳನ್ನು ಗುರುತಿಸಿ ಆ ಭೂಮಿಗಳನ್ನು ಮೂಲ ಮಂಜೂರಾತಿದಾರರ ಸ್ವಾಧೀನತೆಗೆ ತೆಗೆದುಕೊಳ್ಳಲು ಕ್ರಮವಹಿಸಬೇಕು.

1006449123

ನಿಯೋಗದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್, ವಿಭಾಗೀಯ ಸಂಘಟನಾ ಸಂಚಾಲಕ ಶಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕ ಭಾಸ್ಕರ್ ನಿಟ್ಟೂರು, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಬೈಂದೂರು ತಾಲೂಕು ಸಂಚಾಲಕ ಶಿವರಾಜ್, ಕಾಪು ತಾಲೂಕು ಸಂಚಾಲಕ ರಾಜೇಂದ್ರನಾಥ್, ಸಂದೀಪ್ ಕಿರಿಮಂಜೇಶ್ವರ, ರಾಘವ ಬೆಳ್ಳೆ, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X