ಉಡುಪಿ | ಹಳ್ಳಿ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ ಇನ್ನೂ ಜೀವಂತ – ಶ್ಯಾಮರಾಜ್ ಬಿರ್ತಿ

Date:

Advertisements

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದರು.

ಅವರು ಇಂದು ಬ್ರಹ್ಮಾವರ ತಾಲೂಕಿನ ಬಿಲ್ಲಾಡಿಯ ದ.ಸಂ.ಸ.ಅಂಬೇಡ್ಕರ್ ವಾದ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಿಸಿ ಮಾತನಾಡಿದರು.

ಬಿಲ್ಲಾಡಿ ಶಾಖೆ ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದ ದ.ಸಂ.ಸ.ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ದಲಿತ ಸಂಘರ್ಷ ಸಮಿತಿಯ ಹೋರಾಟ ಅಂದ್ರೆ ಅದು ಈ ಸಮಾಜದ ಶೋಷಿತರ ಪರವಾದ ಹೋರಾಟ, ನಿರ್ಗತಿಕರ ಪರವಾದ ಹೋರಾಟ ಇಲ್ಲಿ ಯಾವುದೇ ಸ್ವಹಿತಾಸಕ್ತಿಗೆ ಅವಕಾಶ ಇಲ್ಲ. ನಮ್ಮ ಭೀಮ ಸೇನಾನಿಗಳು ಮೈಯೆಲ್ಲಾ ಕಣ್ಣಾಗಿ ಸಮಾಜದಲ್ಲಿ ನಮಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಬೇಕು. ಶೋಷಣೆ ಮತ್ತು ದೌರ್ಜನ್ಯವನ್ನು ಖಂಡಿಸಿ ದಮನಿತರ ಧ್ವನಿಯಾಗಬೇಕು ಎಂದರು.

Advertisements

ಬಿಲ್ಲಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಥ್ವಿರಾಜ್ ಹೆಗ್ಡೆ, ತಾಲೂಕು ಪಂಚಾಯತ್ ಸದಸ್ಯರಾದ ನಿರ್ಮಲ ಶೆಟ್ಟಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಸಂಚಾಲಕರಾದ ವಡ್ಡರ್ಸೆ ಶ್ರೀನಿವಾಸ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ ವಂಡಾರು. ಚಂದ್ರಶೇಖರ್ ಶೆಟ್ಟಿ ಬಿಲ್ಲಾಡಿ, ದ.ಸಂ.ಸ.ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಜಿಲ್ಲಾ ಸಮಿತಿಯ ಸಧಸ್ಯರಾದ ಕುಮಾರ್ ಕೋಟಾ, ಹರೀಶ್ಚಂದ್ರ ಬಿರ್ತಿ, ರಾಜು ಬೆಟ್ಟಿನಮನೆ, ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಶಿವಾನಂದ ಬಿರ್ತಿ ಉಪಸ್ಥಿತರಿದ್ದರು.

ಪ್ರಶಾಂತ್ ಬಿರ್ತಿ ಮತ್ತು ತಂಡದವರಿಂದ ಹೋರಾಟದ ಗೀತೆಗಳನ್ನು ಹಾಡಲಾಯಿತು. ಗೌರಿ ಬಿಲ್ಲಾಡಿ ಅವರನ್ನು ಬಿಲ್ಲಾಡಿ ಶಾಖೆಯ ಮಹಿಳಾ ಸಂಚಾಲಕಿಯವರಾಗಿ ಆಯ್ಕೆ ಮಾಡಲಾಯಿತು‌. ಮೊದಲಿಗೆ ಚಂದ್ರ ಕೊರ್ಗಿಯವರು ಎಲ್ಲರನ್ನೂ ಸ್ವಾಗತಿಸಿದರು ಶ್ರೀನಿವಾಸ್ ಮಲ್ಯಾಡಿ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X