ದಸರಾ | ನನಗೆ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

Date:

ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ನನ್ನನ್ನು ಸರ್ಕಾರ ಆಯ್ಕೆ ಮಾಡಿದೆ. ಇದು ಕಾವ್ಯಕ್ಕೆ ಸಿಕ್ಕ ಗೌರವ, ಸಾಮಾಜಿಕ ನ್ಯಾಯ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಇದು ಸಾಮಾಜಿಕ ಕಲಾ ನ್ಯಾಯ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಸಿನಿಮಾ ಬರಹಾಗಾರ, ನನಗೆ ಕವಿ ಪಟ್ಟ ಬೇಡ” ಎಂದರು.

ಬರಗಾಲದಲ್ಲಿ ದಸರಾ ಆಚರಿಸುತ್ತಿದ್ದೇವೆ. ನಾವು ರೈತರ ವಿಚಾರವನ್ನು ಗಮನಿಸಿಬೇಕು. ರೈತರ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಬೇಕು. ಸ್ಮಾರ್ಟಿ ಸಿಟಿಗಿಂತ ಸ್ಮಾರ್ಟ್ ವಿಲೇಜ್ ಆಗಬೇಕು” ಎಂದು ಹೇಳಿದರು.

“ಕನ್ನಡದ ಅಸ್ಮಿತೆ ಕಾಪಾಡಬೇಕು. ಹಿಂದಿ ಹೇರಿಕೆ‌ ಇಂದಿನದ್ದಲ್ಲ. ನಾನು ಎಂಟನೇ ತರಗತಿಯಲ್ಲಿದ್ದಾಗಲಿಂದಲೂ ಇದೆ. ದೆಹಲಿಗೆ ಕನ್ನಡ ಬೇಕಾಗಿಲ್ಲ – ನಮಗೆ ಹಿಂದಿ ಬೇಕಾಗಿಲ್ಲ” ಎಂದರು.

“ಮಕ್ಕಳು ಇಂಗ್ಲಿಷ್​​ನಲ್ಲೇ ಓದಬೇಕೆಂಬ ಆಸೆ ಪೊಷಕರಲ್ಲಿದೆ. ಇಂಗ್ಲಿಷ್ ಇದ್ದರೆ ಮಾತ್ರ ಕೆಲಸ ಸಿಗುವುದು ಎಂಬ ಭಾವನೆ ಅವರಲ್ಲಿದೆ. ಮನೆಯಲ್ಲಿ ಇಂಗ್ಲಿಷ್ ಕಲಿಸುವ ಹಂತಕ್ಕೆ ಪೋಷಕರು ಹೋಗಿದ್ದಾರೆ. ಇಂಗ್ಲಿಷ್ ಕೆಲಸಕ್ಕೆ ಇಟ್ಟುಕೊಳ್ಳಿ ಕನ್ನಡದ ಅಸ್ಮಿತೆ ಉಳಿಸಲು ಕಲಿಯಿರಿ. ಶಾಲೆಯಿಂದ ಮಾತ್ರವಲ್ಲ, ಮನೆಯಿಂದಲೇ ಕನ್ನಡ ಕಲಿಕೆ‌ ಆಗಬೇಕು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...