ಮಂಗಳೂರು | ಮುಡಿಪು ಜಿಲ್ಲಾ ಮುಖ್ಯ ರಸ್ತೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ

Date:

Advertisements

ಮುಡಿಪು ಮತ್ತು ಅಸೈಗೋಳಿ ಮಧ್ಯೆ ಹಾದು ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸಲು ಆಗ್ರಹಿಸಿ ಡಿವೈಎಫ್ಐ ಮುಡಿಪು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರಾದ ರಝಾಕ್ ಮೊಂಟೆಪದವು, ಮುಡಿಪು ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಈ ಬಗ್ಗೆ ಡಿವೈಎಫ್ಐ ಭಿತ್ತಿ ಪತ್ರ ಅಂಟಿಸಿ ಎಚ್ಚರಿಕೆ ನೀಡಿತ್ತು. ಪರಿಣಾಮವಾಗಿ ಎಚ್ಚೆತ್ತ ಸಂಬಂಧಪಟ್ಟ ಇಲಾಖೆಯು ಕೇವಲ ಕಾಂಕ್ರಿಟ್ ಮಿಶ್ರಣ ಹಾಕಿ ಅಸಮರ್ಪಕವಾಗಿ ದುರಸ್ತಿಗೊಳಿಸಿದೆ. ಈ ಅಸಮರ್ಪಕ ದುರಸ್ತಿ ಕಾರ್ಯದಿಂದಾಗಿ ವಾಹನ ಅಪಘಾತಗಳು ಹೆಚ್ಚಾಗಿವೆ ಎಂದು ದೂರಿದರು.

ಮುಡಿಪು 1

ಇಲ್ಲಿನ ಶಾಸಕರಾದ ಸ್ಪೀಕರ್ ಯು.ಟಿ ಖಾದರ್ ಅವರು ಟೋಲ್ ಮುಕ್ತ ರಸ್ತೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಇದು ಜನರ ಪ್ರಾಣ ತೆಗೆಯುವ ರಸ್ತೆಯಾಗಿ ಮಾರ್ಪಟ್ಟಿದೆ ಎಂಬುದು ಅವರಿಗೆ ಕೂಡಲೇ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಧರಣಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

Advertisements

ಇದನ್ನು ಓದಿದ್ದೀರಾ? ಮಂಗಳೂರು | ತಿರುವು ಪಡೆದುಕೊಂಡ ತಾರಾನಾಥ ಕೊಲೆ ಪ್ರಕರಣ: ಅಕ್ಕನಿಂದಲೇ ಹತ್ಯೆ!

ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಮಾತನಾಡಿದರು. ಪ್ರತಿಭಟನೆಯಲ್ಲಿ ರಫೀಕ್ ಹರೇಕಳ, ಶಾಫಿ ಮುಡಿಪು, ಅಲಿ ಕಾಯಾರ್, ರಾಮಚಂದ್ರ ಫಜೀರ್, ಫಾರೂಕ್ ಕೊಣಾಜೆ, ಅಬೂಬಕ್ಕರ್ ಜಲ್ಲಿ, ಇಕ್ಬಾಲ್ ಕುರ್ನಾಡು, ನೌಶಾದ್ ಕುರ್ನಾಡು, ಖಲೀಲ್ ನಂದರಪಡ್ಪು, ಇಕ್ಬಾಲ್ ಹರೇಕಳ, ಹೈದರ್ ಆಲಡ್ಕ, ಬಶೀರ್ ಲಚ್ಚಿಲ್, ರಫೀಕ್ ಕಡ್ವಾಯಿ, ಇಬ್ರಾಹಿಂ ಮದಕ, ಭರತ್ ಕುತ್ತಾರ್, ಇಬ್ರಾಹಿಂ ಹೂ ಹಾಕುವ ಕಲ್ಲು ಮುಂತಾದವರು ಉಪಸ್ಥಿತರಿದ್ದರು. ರಝಾಕ್ ಮುಡಿಪು ಸ್ವಾಗತಿಸಿ, ಅಲ್ತಾಫ್ ಮುಡಿಪು ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X