ಕೊಡಗು, ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಭೂಕಂಪನದ ಅನುಭವ

Date:

Advertisements

ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.

ಬೆಳಗ್ಗೆ 6:30ರ ವೇಳೆಗೆ 2 ರಿಂದ 3 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಪಿರಿಯಾಪಟ್ಟಣ ತಾಲೂಕಿನ ಅಡುಗೂರು ಮತ್ತು ಕಣಗಾಲು ಸುತ್ತಮುತ್ತ ಭಾಗದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ಭೂಮಿ ಕಂಪಿಸುವ ವೇಳೆ ಗುಂಡಿಗಳಿರುವ ರಸ್ತೆಯಲ್ಲಿ ಲಾರಿ ಚಲಿಸುವಾಗ ಉಂಟಾಗುವ ಶಬ್ಧದಂತೆ ಸದ್ದು ಉಂಟಾಗಿದೆ. ಕೆಲವೆಡೆ ಡ್ಯಾಂನಲ್ಲಿ ನೀರು ಬಿಟ್ಟಾಗ ಆಗುವ ಶಬ್ಧ ಕೇಳಿದ ಅನುಭವ ಉಂಟಾಗಿದೆ. ಭೂಮಿಯಿಂದ ಬಂದ ವಿಚಿತ್ರ ಶಬ್ಧದಿಂದ ಜನ ಆತಂಕಕ್ಕೊಳಗಾಗಿದ್ದರು.

Advertisements

ಕುಶಾಲನಗರ, ಮುಳ್ಳುಸೋಗೆ, ಕೂಡುಮಂಗಳೂರು, ‌ಹೆಬ್ಬಾಲೆಭಾಗದಲ್ಲಿ ಭಾರೀ ಶಬ್ದ ಉಂಟಾಗಿರುವುದಾಗಿ ವರದಿಯಾಗಿದೆ. ಕುಶಾಲನಗರದ ಜ್ಞಾನಭಾರತಿ ಶಾಲೆ ಹಿಂಭಾಗ, ಬಸವನತ್ತೂರು, ಹೆಬ್ಬಾಲೆಯ ಹಕ್ಕೆ, ಹುಲುಸೆ ವ್ಯಾಪ್ತಿಯಲ್ಲಿ ಭೂಮಿ‌‌ ಕಂಪಿಸಿದ‌ ಅನುಭವ ಉಂಟಾಗಿರುವ ಬಗ್ಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

ಬೆಳಗ್ಗೆ 6.35 ರ ಸಮಯದಲ್ಲಿ ಎರಡು‌ ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವ ಉಂಟಾದ ಬಗ್ಗೆ ಕುಶಾಲನಗರದ ಮೋಹನ್ ಹಾಗೂ ಬಸವನತ್ತೂರಿನ ಮಂಜುನಾಥ್, ಹಕ್ಕೆಯ ಸುರೇಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹುತೇಕ‌ ಮಂದಿ ನಿದ್ರೆಯಲ್ಲಿದ್ದ ಕಾರಣ ಕೆಲವರಿಗಷ್ಟೇ ಕಂಪನದ‌ ಅನುಭವ ಆಗಿದ್ದು, ಭೂಕಂಪನ‌ ಉಂಟಾಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X