ತುಮಕೂರು | ಈ ದಿನ ವರದಿಗೆ ಎಚ್ಚೆತ್ತ ಪೊಲೀಸರು: ಬೆಳೆ ಹಾನಿಗೈದು ಕ್ರೌರ್ಯ ಮೆರೆದಿದ್ದವರ ವಿರುದ್ಧ ಎಫ್‌ಐಆರ್

Date:

Advertisements

ತುಮಕೂರು ತಾಲೂಕು ಗೂಳೂರು ಹೋಬಳಿಯ ಏ ಕೆ ಕಾವಲ್‌ನ ಜಮೀನೊಂದರಲ್ಲಿ ನಡೆದಿದ್ದ ಬೆಳೆ ಹಾನಿಗೆ ಸಂಬಂಧಿಸಿದಂತೆ ಈ ದಿನ ಡಾಟ್ ಕಾಮ್ನ ನಿರಂತರ ವರದಿ ಪ್ರಕಟಿಸಿದ ಪರಿಣಾಮ, ಆರೋಪಿಗಳ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊನೆಗೂ ಎಫ್‌ಐಆರ್ ದಾಖಲಾಗಿದೆ.

ರೈತ ರಾಮಾಂಜಿನಯ್ಯ ಹಾಗೂ ರಾಧಾಕೃಷ್ಣ ಅವರ ಜಮೀನಿನಲ್ಲಿ ಬೆಳೆದಿದ್ದ ರಾಗಿ ಪೈರಿನ ಮೇಲೆಯೇ ಆಗಸ್ಟ್‌ 13ರಂದು ಉಳುಮೆ ಮಾಡಿ ಕ್ರೌರ್ಯ ಮೆರೆದಿದ್ದ ಆರೋಪಿ ಪದ್ಮನಾಭ್ ಮೇಲೆ ಪೊಲೀಸರು ಎಫ್‌ಐಆರ್ ದಾಖಲು ಮಾಡುವ ಮೂಲಕ ಪುಂಡಾಟಕ್ಕೆ ಬ್ರೇಕ್ ಹಾಕಿದ್ದಾರೆ.

ತುಮಕೂರು
ಹಾನಿಗೈಯ್ಯಲಾಗಿದ್ದ ಜಮೀನು

‘ರಾಗಿ ಪೈರಿನ ಮೇಲೆ ಉಳುಮೆ ಮಾಡಿ ಕ್ರೌರ್ಯ’, ‘ಬೆಳೆ ಹಾನಿ: ಆರೋಪಿ ರಕ್ಷಣೆಗೆ ಯತ್ನ’ ಎಂಬ ಶೀರ್ಷಿಕೆ ಬರಹದಡಿಯಲ್ಲಿ ಈದಿನ ಡಾಟ್ ಕಾಮ್ ನಲ್ಲಿ ವಾರವಾದರೂ ಪ್ರಕರಣ ದಾಖಲಿಸದ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿ ಫಾಲೋ-ಅಪ್ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಪೊಲೀಸರು, ಸ್ಥಳ ಮಹಜರು ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ತುಮಕೂರು| ಬೆಳೆ ಹಾನಿ : ಆರೋಪಿಗಳ ರಕ್ಷಣೆಗೆ ಯತ್ನ

ಈ ದಿನ.ಕಾಮ್ ಈ ಕಾರ್ಯಕ್ಕೆ ರೈತರಿಂದ ಶ್ಲಾಘನೆ ವ್ಯಕ್ತವಾಗಿದ್ದು, ರೈತರೊಂದಿಗೆ ನಿಂತು ನ್ಯಾಯ ಒದಗಿಸಿಕೊಡಲು ಶ್ರಮಿಸುವ ಈದಿನ ಡಾಟ್ ಕಾಮ್ ಗೆ ನಾವು ಎಂದಿಗೂ ಋಣಿಯಾಗಿರುತ್ತೇವೆ ಎನ್ನುವ ಮೂಲಕ ಸಂತ್ರಸ್ತರು ಕೃತಜ್ಞತೆ ಸಲ್ಲಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X