ಈ ದಿನ ವರದಿ ಫಲಶೃತಿ | ಕಲಬುರಗಿ : ನಾವದಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು

Date:

Advertisements

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿಯಲ್ಲಿತ್ತು. ಈ ಶಾಲೆಯಲ್ಲಿ ಒಟ್ಟು 6 ಕೊಠಡಿಗಳಿದ್ದು, ಇಂದು ನಾಳೆಯೋ ಬೀಳುವ ಹಂತದಲ್ಲಿವೆ. ಮಳೆ ಜೋರಾಗಿ ಸುರಿಯತೊಡಗಿದರೆ ಕೂಡಲೇ ಮಕ್ಕಳನ್ನು ಶಾಲೆಯ ಹೊರಗಡೆ ತಂದು ಕೂರಿಸುತ್ತಾರೆ. ಈ ಶಾಲೆಯ ಸಮಸ್ಯೆಯ ಬಗ್ಗೆ ಈ ದಿನ.ಕಾಮ್ ಆಗಸ್ಟ್ 1ರಂದು ವರದಿ ಪ್ರಕಟಿಸಿತ್ತು.

ಈ ವಿಡಿಯೋ ವರದಿಯನ್ನು ಗಮನಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗೆ ಇಂದು (ಆ.2) ಭೇಟಿ ನೀಡಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಶಾಲೆಗೆ ಭೇಟಿ ನೀಡಿದ ಡಿಡಿಪಿಐ ಸೂರ್ಯಕಾಂತ ಮದನೆ, ಕಮಲಾಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಂಬರೀಷ್ ಭೇಟಿ ನೀಡಿದ್ದು, ಶಾಲೆಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದರು.

Advertisements

ಭೇಟಿಯ ವೇಳೆ ಉಪಸ್ಥಿತರಿದ್ದ ನವದಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಅವರೊಂದಿಗೂ ಕೂಡ ಮಾಹಿತಿ ಕಲೆ ಹಾಕಿದರು.

“ನಾಲ್ಕು ಹೊಸ ಕೋಣೆಗಳು ನಿರ್ಮಾಣ ಮಾಡಿಕೊಡುವುದಾಗಿ ಭೇಟಿ ನೀಡಿ ಭರವಸೆ ನೀಡಿದ್ದಾರೆ. ಉಳಿದ ಕೋಣೆಗಳು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ನೆರವಿನೊಂದಿಗೆ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಯನ್ನು ವರದಿ ಪ್ರಕಟಿಸುವ ಮೂಲಕ ಅಧಿಕಾರಿಗಳ ಗಮನ ಸೆಳೆದಿದ್ದಕ್ಕಾಗಿ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಅವರು ಈ ದಿನ. ಕಾಮ್ ಗೆ ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2024 08 02 at 3.25.35 PM
WhatsApp Image 2024 08 02 at 3.25.14 PM
WhatsApp Image 2024 08 02 at 2.28.33 PM
ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X