‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

Date:

ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಅಂಗನವಾಡಿಗೆ ಕೊನೆಗೂ ‘ವಿದ್ಯುತ್ ಭಾಗ್ಯ’ ಲಭಿಸಿದೆ. ಹೌದು. ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್.

- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಳಗೋಡು ಗ್ರಾಮದ ಅಂಗನವಾಡಿ ಕೇಂದ್ರವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಮಕ್ಕಳು ಹಾಗೂ ಅಂಗನವಾಡಿ ಶಿಕ್ಷಕಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ದಿನ.ಕಾಮ್ ವಿಸ್ತಾರವಾಗಿ ವರದಿ ಹಾಗೂ ವಿಡಿಯೋ ವರದಿಯನ್ನು ಆಗಸ್ಟ್ 13ರಂದು ಪ್ರಕಟಿಸಿತ್ತು. ಈ ದಿನ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿದ್ದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಬೆಳಗೋಡು ಗ್ರಾಮದ ಅಂಗನವಾಡಿಗೆ ದಿನನಿತ್ಯ 10-15 ಕ್ಕಿಂತ ಹೆಚ್ಚು ಮಕ್ಕಳು ಬರುತ್ತಾರೆ. ಅಂಗನವಾಡಿಯಲ್ಲಿ ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿತ್ತು. ಮಕ್ಕಳಿಗೆ ಶೌಚಾಲಯಕ್ಕೆ ಹೋಗಬೇಕಾದರೆ ಕಾಡಿನ ಮಧ್ಯೆ ಹಾಗೂ ಹಸಿರು ಗಿಡ ಗಂಟಿಗಳ ಪೊದೆಗಳ ಮಧ್ಯೆ ಹೋಗಬೇಕಿತ್ತು. ಆ ಜಾಗಗಳಲ್ಲಿ ಹಾವು ಉಪಟಳಗಳು ಹಾಗೂ ಕೀಟಗಳ ಕಾಟ ಎದುರಾಗುತ್ತಿದ್ದವು.

ಸರಿಯಾದ ಶೌಚಾಲಯ ಹಾಗೂ ವಿದ್ಯುತ್ ವ್ಯವಸ್ಥೆ ಅಂಗನವಾಡಿಯಲ್ಲಿ ಇರಲಿಲ್ಲ. ಸರಿಯಾದ ಕುರ್ಚಿ,ಟೇಬಲ್ ವ್ಯವಸ್ಥೆ ಕೂಡ ಇರಲಿಲ್ಲ. ಅರ್ಧಕ್ಕೆ ನಿಲ್ಲಿಸಲಾಗಿದ್ದ ಶೌಚಾಲಯ ಹಾಗೂ ಅದಕ್ಕಾಗಿ ತೆಗೆದಿರುವ ಪಿಟ್ ಗುಂಡಿಯಲ್ಲಿ ನೀರು ಸೋರಿಕೆ ಉಂಟಾಗಿತ್ತು. ಅಂಗನವಾಡಿ ಅಡುಗೆ ಮನೆಯು ಪಕ್ಕದಲ್ಲಿರುವುದರಿಂದ ದುರ್ವಾಸನೆ ಬೀರುತ್ತಿದ್ದವು. ಇದರಿಂದಾಗಿ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಈದಿನ.ಕಾಮ್ ವಿಡಿಯೋ ಸಹಿತ ವರದಿ ಮಾಡಿತ್ತು.

1001422413
ಅಂಗನವಾಡಿ ಮುಂದೆ ಅಳವಡಿಸಲಾದ ವಿದ್ಯುತ್ ಕಂಬ ಹಾಗೂ ತಂತಿ

ಈ ದಿ‌ನ.ಕಾಮ್ನ ವರದಿಯನ್ನು ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಓ ರಂಗನಾಥ್ ಮತ್ತು ಸೂಪರ್ ವೈಸರ್ ಶಿವಕುಮಾರಿ ಅವರು ಬೆಳಗೋಡು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆ ಬಳಿಕ ಸಂಬಂಧಿಸಿದ ಇಲಾಖೆಯ ಮೂಲಕ ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ಅಳವಡಿಸಿದ್ದಾರೆ.

ಅಂಗನವಾಡಿ ಮಕ್ಕಳಿಗೆ ಕುಳಿತು ಕೊಳ್ಳುವುದಕ್ಕೆ ಬೆಂಚು, ಕುರ್ಚಿ, ಟೇಬಲ್, ಅಡುಗೆ ಮನೆ ಉಪಕರಣ, ಮಕ್ಕಳಿಗೆ ಪುಸ್ತಕ ಇಡುವುದಕ್ಕೆ ಟೇಬಲ್ ಮತ್ತು ಪಿಟ್ ಗುಂಡಿ ಸಮಸ್ಯೆ ಸರಿಪಡಿಸುತ್ತೇವೆಂದು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಪರಿಶೀಲಿಸಿ ಕೆಲಸ ಮಾಡಿಸಿ ಕೊಡುತ್ತೇವೆಂದು ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ?

ಅಂಗನವಾಡಿ ಸಮಸ್ಯೆಯನ್ನು ಬಗೆಹರಿಸಲು ವರದಿ ಮಾಡಿದ್ದಕ್ಕಾಗಿ ಈ ದಿನ. ಕಾಮ್ ತಂಡಕ್ಕೆ ಅಂಗನವಾಡಿಯ ಶಿಕ್ಷಕಿ ದ್ರಾಕ್ಷಾಯಿಣಿ, ಸಹಾಯಕಿ ಚಂದ್ರಕಲಾ ಹಾಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...