ಬೀದರ್‌ | ಈದಿನ ಫಲಶೃತಿ: ಭರದಿಂದ ಸಾಗಿದ ಕಮಲನಗರ ಬಸ್‌ ನಿಲ್ದಾಣ ದುರಸ್ತಿ ಕಾರ್ಯ

Date:

Advertisements

ಬೀದರ್‌ ಜಿಲ್ಲೆಯ ಕಮಲನಗರ ಪಟ್ಟಣದ ಮದನೂರ ರಸ್ತೆಯಲ್ಲಿರುವ ಬಸ್‌ ನಿಲ್ದಾಣದ ದುರಸ್ತಿ ಕಾರ್ಯ ಭರದಿಂದ ಸಾಗಿದೆ.

ಈ ಬಗ್ಗೆ ಈದಿನ.ಕಾಮ್‌ ನಲ್ಲಿ ಕಳೆದ ಅಕ್ಟೋಬರ್‌ 5ರಂದು ʼಬಳಕೆಯಾಗದೇ ಪಾಳುಬಿದ್ದಿದೆ ಕಮಲನಗರ ಬಸ್ ನಿಲ್ದಾಣʼ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಅಧಿಕಾರಿಗಳು ಪಾಳು ಬಿದ್ದ ಬಸ್‌ ನಿಲ್ದಾಣ ಕಟ್ಟಡದ ರಿಪೇರಿ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣ ಬಳಕೆಯಾಗದೇ ಹಾಳು ಕೊಂಪೆಯಾಗಿತ್ತು. ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ, ಆದರೂ ಸಾರ್ವಜನಿಕರಿಗೆ ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ. ಇದ್ದ ಬಸ್‌ ನಿಲ್ದಾಣ ಆವರಣದಲ್ಲಿ ಗಿಡ-ಗಂಟಿಗಳು ಬೆಳೆದಿವೆ, ಕಟ್ಟಡದ ಕಿಡಿಕಿ, ಬಾಗಿಲು ಪುಡಿಯಾಗಿ ಇದ್ದೂ ಇಲ್ಲದಂತಾಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

Advertisements
KAMALANAGAR BUS STAND 21 1
ಅ.5 ರಂದು ʼಈದಿನ.ಕಾಮ್‌ʼ ನಲ್ಲಿ ಪ್ರಕಟಿತ ವರದಿ

“ಬಸ್‌ ನಿಲ್ದಾಣ ಆವರಣದಲ್ಲಿ ಬೆಳೆದಿದ್ದ ಗಿಡ-ಗಂಟಿಗಳು ತೆಗೆದು ಸ್ವಚ್ಛಗೊಳಿಸಲಾಗಿದೆ. ಕಾಂಪೌಂಡ್‌ ಸೇರಿದಂತೆ ನಿಲ್ದಾಣದಲ್ಲಿನ ಕೋಣೆಗಳಿಗೆ ಬಣ್ಣ ಬಳಿಯುವ ಕಾರ್ಯ ಮುಗಿದಿದ್ದು. ಓರ್ವ ಕಂಟ್ರೊಲರಿಗೆ ನೇಮಕ ಮಾಡಲಾಗಿದೆ. ಕಿಟಿಕಿಗಳಿಗೆ ಹೊಸ ಗ್ಲಾಸ್‌ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರ ಕೆಲಸಗಳು ಬಾಕಿ ಉಳಿದಿವೆ, ಇನ್ನೊಂದು ವಾರದಲ್ಲಿ ದುರಸ್ತಿ ಕಾರ್ಯ ಸಂಪೂರ್ಣ ಮುಗಿಯುತ್ತದೆ. ಕಳೆದ ಎರಡು ವಾರದಿಂದ ಔರಾದ ಬಸ್‌ ಘಟಕದ ಎಲ್ಲಾ ಬಸ್‌ ಕಮಲನಗರ ಬಸ್ ನಿಲ್ದಾಣಕ್ಕೆ ತೆರಳುತ್ತಿವೆ. ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆಯ ಎಲ್ಲಾ ಬಸ್‌ ಕಮಲನಗರ ನಿಲ್ದಾಣಕ್ಕೆ ಬರುವಂತೆ ಸೂಚಿಸಲಾಗುವುದು ಎಂದು ಔರಾದ ತಾಲೂಕು ಘಟಕ ವ್ಯವಸ್ಥಾಪಕ ಎಸ್. ಟಿ.ರಾಠೋಡ್, ಈದಿನ.ಕಾಮ್ ದೊಂದಿಗೆ ಮಾತನಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗವಿಕಲರ ನಿಧಿ ಸಮಪರ್ಕವಾಗಿ ಬಳಕೆಗೆ ಆಗ್ರಹ

ಸುಮಾರು ವರ್ಷಗಳಿಂದ ಪಾಳು ಬಿದ್ದಿದ್ದ ಕಮಲನಗರ ಬಸ್‌ ನಿಲ್ದಾಣ ಕುರಿತು ಈದಿನ.ಕಾಮ್‌ ಪ್ರಕಟಿಸಿದ ವಿಶೇಷ ವರದಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ದುರಸ್ತಿ ಕಾರ್ಯ ಮಾಡುವ ಮೂಲಕ ಬಸ್‌ ನಿಲ್ದಾಣಕ್ಕೆ ಕಳೆ ತಂದಂತಾಗಿದೆ. ಜನಸಂಖ್ಯೆ ಹೆಚ್ಚಾದ ಪರಿಣಾಮ ವಾಹನ ಸಂಚಾರವೂ ದಟ್ಟಣೆಯಾಗಿದೆ. ಎಲ್ಲಾ ಮಾರ್ಗದ ಬಸ್‌ ಗಳು ಬಸ್‌ ನಿಲ್ದಾಣಕ್ಕೆ ಬರುವಂತಾದರೆ ಸಾರ್ವಜನಿಕರಿಗೆ ಅನುಕೂಲ ಆಗುತ್ತದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X