ಬೀದರ್‌ | ವಲಸೆ ತಪ್ಪಿಸಲು ನರೇಗಾ ಪರಿಣಾಮಕಾರಿ ಅನುಷ್ಠಾನಗೊಳಿಸಿ : ಸಿಇಒ ಗಿರೀಶ ಬದೋಲೆ

Date:

Advertisements

ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.

ಭಾಲ್ಕಿ ತಾಲೂಕಿನ ಮೇಥಿ ಮೇಳಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಸೋಮವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿ ವೀಕ್ಷಿಸಿ ಮಾತನಾಡಿ, ʼಗ್ರಾಮೀಣ ಭಾಗದಲ್ಲಿ ಬಡ
ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಗಟ್ಟಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕುʼ ಎಂದು ತಿಳಿಸಿದರು.

ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಹೊರ ವಲಯದ ಪುರಾತನ ಕೋಟೆಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಳಗಾವಿ ಸುವರ್ಣ ಸೌಧದಲ್ಲಿ ʼಅನುಭವ ಮಂಟಪʼ ಚಿತ್ರ ಅನಾವರಣ : ಪಟ್ಟದ್ದೇವರು ಹರ್ಷ

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X