ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

Date:

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್‌ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ ದಾಸೋಹದ ನೌಕರರು ಆಶಿಸುತ್ತಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2022-23) ರಾಜ್ಯ ಸರ್ಕಾರವು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ನೀಡಲು ಆರಂಭಿಸಿತು. ಈ ಒಂದು ವರ್ಷದಲ್ಲಿ ಮೊಟ್ಟೆಯ ಬೆಲೆ ಏರಿಕೆ ಕಂಡಿದೆ. ಆದರೂ, ಶಾಲೆಗಳಲ್ಲಿ ಮೊಟ್ಟೆ ನೀಡಲು ನಿಗದಿಯಾಗಿದ್ದ ದರ ಏರಿಕೆಯಾಗಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಜುಲೈನಲ್ಲಿ ಮೊಟ್ಟೆ ನೀಡಲು ಆರಂಭಿಸಿದಾಗ ಸರ್ಕಾರ ಮೊಟ್ಟೆಗೂ ನಿಧಿ ಹಂಚಿಕೆ ಮಾಡಿತ್ತು. ಅದರಂತೆ, ಪ್ರತಿ ಮೊಟ್ಟೆಗೆ 6 ರೂ. ನಿಗದಿಪಡಿಸಲಾಗಿತ್ತು. ಅದರಲ್ಲಿ, ಮೊಟ್ಟೆ ಖರೀದಿಗೆ 5 ರೂ., ಮೊಟ್ಟೆ ಬೇಯಿಸಲು 50 ಪೈಸೆ, ಬೇಯಿಸಿದ ಮೊಟ್ಟೆಯನ್ನು ಸುಲಿಯಲು 30 ಪೈಸೆ, ಸಾಗಾಣಿಕೆ ವೆಚ್ಚ 20 ಪೈಸೆ ಎಂದು ನಿಗದಿ ಮಾಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೊತ್ತ ನಿಗದಿಯಾದ ಜುಲೈನಲ್ಲಿ ಮೊಟ್ಟೆ ಬೆಲೆ 4.70 ರೂ. ಇತ್ತು. ಆದರೆ, ಈಗ (ಮೇ 24) ಮೊಟ್ಟೆಯ ಬೆಲೆ ಬೆಂಗಳೂರಿನಲ್ಲಿ ಸಗಟು ಮತ್ತು ಚಿಲ್ಲರೆ ದರಗಳು ಕ್ರಮವಾಗಿ 5.50 ರೂ ಮತ್ತು 6 ರೂ. ಇದೆ. ಅಂತೆಯೇ, ಮಂಗಳೂರಿನಲ್ಲಿ ಕ್ರಮವಾಗಿ 5.60 ಮತ್ತು 5.80 ರೂ. ಇದೆ. ಇನ್ನು ರಾಯಚೂರಿನಲ್ಲಿ 5.70 ರೂ ಮತ್ತು 6 ರೂ. ಇದೆ. ಅಲ್ಲದೆ, ಕಳೆದ ಎರಡು ತಿಂಗಳುಗಳ ಹಿಂದೆ ಮೊಟ್ಟೆ ಬೆಲೆ 6.50 ರೂ. ದಾಟಿತ್ತು. ಹೀಗೆ, ದರಗಳು ಏರಿಳಿತ ಕಾಣುತ್ತಿರುವುದರಿಂದ ಬಜೆಟ್‌ ಬ್ಯಾಲೆನ್ಸ್‌ ಮಾಡುವುದು ಕಷ್ಟವಾಗಿದೆ. ಸರ್ಕಾರ ಮೊಟ್ಟೆಗೆ ನಿಗದಿಪಡಿಸಿರುವ ಬಜೆಟ್‌ ಮೊತ್ತವನ್ನು ಹೆಚ್ಚಿಸಬೇಕು ಎಂದು ಅಕ್ಷರ ದಾಸೋಹದ ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ಇಂದಿರಾ ಕ್ಯಾಂಟೀನ್’ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಲು ಸೂಚನೆ

ಶಾಲೆಗಳಲ್ಲಿ ಬಹುತೇಕ ಮಕ್ಕಳು ಮೊಟ್ಟೆಯನ್ನೇ ತಿನ್ನ ಬಯಸುತ್ತಾರೆ. ಕೆಲವರಷ್ಟೇ ಮೊಟ್ಟೆ ಬದಲಿಗೆ ಚಿಕ್ಕಿಯನ್ನು ಕೇಳುತ್ತಾರೆ. ಮೊಟ್ಟೆಯ ಬೆಲೆ ಏರಿಕೆಯಾಗುತ್ತಿರುವ ಕಾರಣ, ಸರ್ಕಾರ ಮೊಟ್ಟೆಗೆ ನಿಗದಿ ಮಾಡಿರುವ ದರವನ್ನು ಹೆಚ್ಚಿಸಬೇಕು” ಎಂದು ದಕ್ಷಿಣ ಕನ್ನಡದ ಅಕ್ಷರ ದಾಸೋಹ ಅಧಿಕಾರಿ ಉಷಾ ಹೇಳಿದ್ದಾರೆ.

“ಮೊಟ್ಟೆಗೆ ಬಜೆಟ್‌ ಹಂಚಿಕೆಯನ್ನು ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು” ಎಂದು ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ದೇಶಕ ಬಿ.ಎಸ್.ರಘುವೀರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...