ಎಲ್‌ ನಿನೋ ಪರಿಣಾಮ; ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬೇಸಿಗೆ

Date:

ಬೇಸಿಗೆ ಕಾಲ ಇನ್ನೂ ಆರಂಭವಾಗಿಲ್ಲ. ಆದರೂ, ಈಗಾಗಲೇ ಬೇಸಿಗೆಯ ರೀತಿಯಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು (33.3°) ಹೆಚ್ಚಾಗಿದೆ. ಉತ್ತರ ಒಳಭಾಗ ಮತ್ತು ಕರಾವಳಿ ಕರ್ನಾಟಕದಲ್ಲಿ ಹವಾಮಾನ ಒಂದೇ ರೀತಿಯಿದೆ. ಈ ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2° ಹೆಚ್ಚಾಗಿದೆ ಎಂದು ವರದಿಯಾಗಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳುವಂತೆ, ‘ಎಲ್‌ ನಿನೋ’ ಪರಿಣಾಮದಿಂದಾಗಿ ತಾಪಮಾನ ಹೆಚ್ಚಾಗಿದೆ. ಆಗಸ್ಟ್‌ ವೇಳೆಗೆ ಎಲ್‌ ನಿನೋ ತಟಸ್ಥವಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಬೆಂಗಳೂರಿನಲ್ಲಿ ಆರ್ದ್ರ ವಾತಾವರಣವಿದೆ. ನಗರದಲ್ಲಿ ಗರಿಷ್ಠ ತಾಪಮಾನ 33.1° ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18.1° ಸೆಲ್ಸಿಯಸ್ ಇದೆ. ಇದು, ಈ ಸಮಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 30.9° ಸೆಲ್ಸಿಯಸ್ ಮತ್ತು ಕನಿಷ್ಠ 17.6° ಸೆಲ್ಸಿಯಸ್ ಆಗಿರಬೇಕಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 33.1° (ಗರಿಷ್ಠ) ಮತ್ತು 15.9° (ಕನಿಷ್ಠ) ಸೆಲ್ಸಿಯಸ್ ಮತ್ತು ಹಳೆಯ ವಿಮಾನ ನಿಲ್ದಾಣದಲ್ಲಿ 32.9° (ಗರಿಷ್ಠ) ಮತ್ತು 15° (ಕನಿಷ್ಠ) ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ಹೇಳಿದೆ.

”ದಕ್ಷಿಣ ಒಳನಾಡು ಭಾಗಗಳ ಕೆಲವು ಪ್ರದೇಶಗಳು, ಕರಾವಳಿ ಕರ್ನಾಟಕದ ಉಡುಪಿ, ಕಾರವಾರ ಹಾಗೂ ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಕನಿಷ್ಠ 2° ಸೆಲ್ಸಿಯಸ್ ಹೆಚ್ಚಾಗಿದೆ” ಎಂದು ಇಲಾಖೆ ತಿಳಿಸಿದೆ.

ಗಮನಾರ್ಹ ವಿಚಾರವೆಂದರೆ, ಮಾರ್ಚ್ 1ಅನ್ನು ಅಧಿಕೃತವಾಗಿ ಬೇಸಿಗೆಯ ಆರಂಭವೆಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಫೆಬ್ರವರಿ ಮೂರನೇ ವಾರದ ನಂತರ ಬೇಸಿಗೆಯ ಪರಿಸ್ಥಿತಿ ಕಂಡುಬರುತ್ತದೆ. ಆದರೆ, ಈ ವರ್ಷ ಈಗಾಗಲೇ ಬೇಸಿಗೆಯ ಅನುಭವವಾಗುತ್ತಿದೆ. ಇದಕ್ಕೆ ಎಲ್‌ ನೀನೋ ಕಾರಣವೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...