ಚುನಾವಣೆ 2023 | ಮತ ಎಣಿಕೆ ದಿನ ಸಂಭ್ರಮಾಚರಣೆಯಲ್ಲಿ ಪಟಾಕಿ ನಿಷೇಧ

Date:

Advertisements

ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13ರಂದು ನಡೆಯಲಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ಆ ದಿನ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಮುತ್ತ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶಿಸಿದ್ದಾರೆ.

“ವಿಜಯೋತ್ಸವದ ಸಲುವಾಗಿ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮೆರವಣಿಗೆ ಮಾಡುತ್ತಾರೆ. ಇದು ಪರಾಭವಗೊಂಡ ಅಭ್ಯರ್ಥಿ ಬೆಂಬಲಿಗರಿಗೆ ಹಾಗೂ ವಿಜೇತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಹೀಗಾಗಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ನಗರದ ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಘೋಷಿಸಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

“ನಿಷೇಧಿತ ಪ್ರದೇಶ ಹಾಗೂ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ, ಸಮಾರಂಭ, ಜಾತ್ರೆ ಮೆರವಣಿಗೆ ಇತ್ಯಾದಿಗಳನ್ನು ಮಾಡುವುದು, 5 ಜನರಿಗಿಂತ ಹೆಚ್ಚು ಜನರು ಗುಂಪು ಸೇರುವುದು, ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದಕ್ಕೆ ಅವಕಾಶ ಇರುವುದಿಲ್ಲ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

“ನಿಷೇಧಿತ ಅವಧಿಯಲ್ಲಿ ವಾಹನಗಳಿಗೆ ಧ್ವನಿವರ್ದಕ ಅಳವಡಿಸಲು ಅವಕಾಶ ಇರುವುದಿಲ್ಲ. ಪಟಾಕಿ ಸಿಡಿಸುವಂತಿಲ್ಲ. ಮತ ಎಣಿಕೆ ದಿನದಂದು ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಧ್ವನಿವರ್ದಕ, ಮೆಗಾಫೋನ್ ಮುಂತಾದುವುಗಳನ್ನು ಬಳಸಿ ಘೋಷಣೆ ಕೂಗುವುದು, ಭಾಷಣ ಮಾಡುವುದು ಮತ್ತು ಅನುಚಿತವಾಗಿ ವರ್ತಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದಾರೆ.

“ನಿಷೇದಾಜ್ಞೆಯು ಖಾಸಗಿ ಕಾರ್ಯಕ್ರಮಗಳಾಗಿರುವ ಮದುವೆ, ಗೃಹಪ್ರವೇಶ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಉಳಿದಂತೆ ನಿಷೇದಾಜ್ಞೆ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X