ಉತ್ತರ ಕರ್ನಾಟಕ | 2.5 ಲಕ್ಷ ಮಂದಿ ವಲಸೆ ಮತದಾರರ ಸಂಪರ್ಕಕ್ಕೆ ಮುಂದಾದ ಚುನಾವಣಾ ಆಯೋಗ

Date:

Advertisements

ಕಳೆದ ಎರಡು ತಿಂಗಳಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಿಂದ ವಲಸೆ ಬಂದಿರುವ ಮತದಾರರ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಕೇಳಿದೆ. ಗ್ರಾಮೀಣ ಪ್ರದೇಶಗಳಿಂದ ಜನರ ವಾರ್ಷಿಕ ವಲಸೆ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಇದೀಗ ಎದುರಾಗಿರುವ ಬರಗಾಲದಿಂದ ಈ ವರ್ಷ ಫೆಬ್ರವರಿಯಲ್ಲಿಯೇ ವಲಸೆ ಪ್ರಾರಂಭವಾಗಿದೆ.

ಚುನಾವಣಾ ಆಯೋಗದ ಅಂದಾಜಿನ ಪ್ರಕಾರ, ಉತ್ತರ ಕರ್ನಾಟಕದ ಪ್ರದೇಶದ ಸುಮಾರು 2,52,630 ಮಂದಿ ಅರ್ಹ ಮತದಾರರು ಉದ್ಯೋಗವನ್ನು ಹುಡುಕಿಕೊಂಡು ಇತರ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಮತದಾನದ ಶೇಕಡಾವಾರು ಹೆಚ್ಚಿಸಲು ಚುನಾವಣೆಯ ಸಮಯದಲ್ಲಿ ಅವರನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು” ಎಂದು ತಿಳಿಸಿದೆ.

“ಈಗ ಜಿಲ್ಲೆಯ ಸ್ವೀಪ್ ಸಮಿತಿಗಳ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕಾರ್ಯಕ್ರಮ) ಅಧ್ಯಕ್ಷರಾಗಿರುವ ಸಿಇಒಗಳು ತಮ್ಮ ಮನೆಗಳಿಂದ ಸ್ಥಳಾಂತರಗೊಂಡ ಅರ್ಹ ಮತದಾರರ ಸಂಪರ್ಕ ಸಂಖ್ಯೆಯನ್ನು ಕೋರಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಈಗಾಗಲೇ ಡೇಟಾವನ್ನು ಸಂಗ್ರಹಿಸಿದ್ದು, ವಲಸೆ ಮತದಾರರ ಸಂಪರ್ಕ ಸಂಖ್ಯೆಗಳು ದೊರೆತ ಬಳಿಕ ನಾವು ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತೇವೆ. ಮೇ 7ರಂದು ಮತ ಚಲಾಯಿಸುವಂತೆ ಮನವೊಲಿಸುತ್ತೇವೆ” ಎಂದು ಅಧಿಕಾರಿಯೊಬ್ಬರು ವಿವರಿಸಿದರು.

Advertisements

ವಲಸೆ ಬಂದ ಮತದಾರರನ್ನು ಪಟ್ಟಿ ಮಾಡುವುದರ ಜತೆಗೆ, ಬಿಎಲ್ಒಗಳು ಮೃತ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಾರೆ. ಮುಂದಿನ ಕೆಲವು ವಾರಗಳಲ್ಲಿ ತಿದ್ದುಪಡಿಗಳು ಮತ್ತು ಹೆಚ್ಚುವರಿ ಕೆಲಸಗಳನ್ನು ಮಾಡಲಾಗುವುದು. ವಲಸೆ ಬಂದ ಮತದಾರರ ಹತ್ತಿರದ ಸಂಬಂಧಿಕರನ್ನು ಬಿಎಲ್ಒಗಳು ಸಂಪರ್ಕಿಸುತ್ತಿದ್ದು, ಅವರು ಎಲ್ಲಿದ್ದಾರೆ ಮತ್ತು ಅವರನ್ನು ಹೇಗೆ ತಲುಪಬೇಕು ಎಂಬುದನ್ನು ತಿಳಿದುಕೊಳ್ಳುತ್ತಿದ್ದಾರೆ.

“ಅನೇಕ ಬಾರಿ, ರಾಜಕೀಯ ಪಕ್ಷಗಳು ರಾಜ್ಯ ಮತ್ತು ದೇಶದ ವಲಸೆ ಮತದಾರರಿಗೆ ಬಸ್ಸುಗಳು, ಪಾರ್ಟಿಗಳು ಮತ್ತು ಉಡುಗೊರೆಗಳನ್ನು ವ್ಯವಸ್ಥೆ ಮಾಡುತ್ತವೆ. ಉದಾಹರಣೆಗೆ, ರಾಜಕೀಯ ಪಕ್ಷವೊಂದು ಚುನಾವಣೆಗೆ ಸ್ವಲ್ಪ ಮೊದಲು ಗೋವಾದಲ್ಲಿ ಉತ್ತರ ಕರ್ನಾಟಕದ ವಲಸಿಗರಿಗೆ ಅದ್ದೂರಿ ಔತಣಕೂಟವನ್ನು ಏರ್ಪಡಿಸಿತ್ತು. ಈ ಬಾರಿ, ಚುನಾವಣಾ ಆಯೋಗ ಮತ್ತು ಸ್ಥಳೀಯ ಆಡಳಿತವು ಮತದಾರರನ್ನು ಮರಳಿ ಕರೆತರಲು ಬಸ್ಸುಗಳನ್ನು ವ್ಯವಸ್ಥೆ ಮಾಡುತ್ತದೆ” ಎಂದು ಅಧಿಕಾರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ವಿವಿಯಲ್ಲಿ ಅಕ್ರಮ; ಇಪಿಎಫ್‌ ಹಣ ಹಾಕದೆ ವಂಚನೆ ಆರೋಪ

“ಎಲ್ಲ ಕಾರ್ಮಿಕರನ್ನು ಸಂಪರ್ಕಿಸುವುದು ಆಡಳಿತಕ್ಕೆ ಸುಲಭದ ಕೆಲಸವಲ್ಲ. ಆಯೋಗವು ವಿವಿಧ ಮಾಧ್ಯಮಗಳ ಮೂಲಕ ಮತದಾನ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಲಿದೆ. ಉದಾಹರಣೆಗೆ, ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 15,000 ಮಂದಿ ವಲಸೆ ಮತದಾರರಿದ್ದರೆ. ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 45,000 ಮಂದಿ ವಲಸೆ ಮತದಾರರಿದ್ದಾರೆ. ಗದಗ, ರಾಯಚೂರು ಮತ್ತು ಕಲಬುರಗಿಯ ಸಂಖ್ಯೆಗಳನ್ನು ಸಂಗ್ರಹಿಸಲಾಗುತ್ತಿದೆ. ಬೇಸಿಗೆಯಲ್ಲಿ ಅತಿ ಹೆಚ್ಚು ವಲಸೆ ಬರುವ ತಾಂಡಾಗಳಿಗೆ (ಕುಗ್ರಾಮಗಳು) ಬಿಎಲ್ಒಗಳು ಭೇಟಿ ನೀಡುತ್ತಾರೆ. ಹಳ್ಳಿಗಳು ಮತ್ತು ಇತರ ಪ್ರದೇಶಗಳಲ್ಲಿ ಬೀದಿ ನಾಟಕಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X