ಕೊಡಗು | ಗ್ರಾಮದಲ್ಲಿ ಕಾಡಾನೆ, ಹುಲಿ ಹಾವಳಿ; ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ; ಆರೋಪ

Date:

Advertisements

ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಬಳಿಯ ಕೋಳತೋಡು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಹಲವು ತಿಂಗಳಿಂದ ನಡೆಯುತ್ತಿರುವ ವನ್ಯಜೀವಿಗಳ ಉಪಟಳದಿಂದಾಗಿ ಜನ ಬೇಸತ್ತು ಹೋಗಿದ್ದಾರೆ. ಕಾಡಿನಲ್ಲಿ ಇರಬೇಕಾದ ವನ್ಯಜೀವಿಗಳು ನಾಡಿಗೆ ಬಂದು ಕೃಷಿಕರಿಗೆ ತೀವ್ರ ತೊಂದರೆ ನೀಡುತ್ತಿವೆ. ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಗ್ರಾಮದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿಗಳ ಹಾವಳಿ ಬಗ್ಗೆ ಮಾತನಾಡಿದ ಗ್ರಾಮದ ಮುರುವಂಡ ಸಾವನ್, “ಹಲವು ತಿಂಗಳಿಂದ ಹುಲಿಯೊಂದು ಗ್ರಾಮದಲ್ಲಿ ನಿರಂತರವಾಗಿ ಅಡ್ಡಾಡುತ್ತಿದೆ. ತನ್ನ ಮರಿಯೊಂದಿಗೆ ಆಗಿದ್ದಾಗೆ ಜನರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಗ್ರಾಮಸ್ಥರು ಭಯದಿಂದಲೇ ದಿನ ಕಳೆಯುವಂತಾಗಿದೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮಸ್ಥರೊಬ್ಬರ ಎರಡು ನಾಯಿಗಳು ಕಾಣೆಯಾಗಿದ್ದು, ಇವುಗಳು ಹುಲಿಯ ದಾಳಿಗೆ ಬಲಿಯಾಗಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

Advertisements

“ಹುಲಿ ಸಂಚಾರದಿಂದಾಗಿ ಕಾರ್ಮಿಕರು ಭಯಪಡುತ್ತಿದ್ದು, ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕೃಷಿ ಚಟುವಟಿಕೆಗಳಿಗೆ ನೇರ ಪರಿಣಾಮ ಬೀರುತ್ತಿದೆ. ಅಲ್ಲದೆ ಈ ಭಾಗದಲ್ಲಿರುವ ಕೃಷಿಕರ ಮತ್ತು ಕೃಷಿ ಕಾರ್ಮಿಕರ ಮಕ್ಕಳು ಪ್ರತಿನಿತ್ಯ ಆತಂಕದಲ್ಲೇ ಶಾಲಾ-ಕಾಲೇಜುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ” ಎಂದು ಸಾವನ್ ವಿವರಿಸಿದ್ದಾರೆ.

“ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ಭತ್ತದ ಕೃಷಿಕರು ತಮಗಿರುವ ಅಲ್ಪ ಸ್ವಲ್ಪ ಗದ್ದೆಯಲ್ಲಿ ಭತ್ತದ ಕೃಷಿ ಮಾಡಿದ್ದಾರೆ. ಇದೀಗ ಭತ್ತ ಕೊಯ್ಲಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳ ಹಿಂಡು ಭತ್ತದ ಗದ್ದೆಗೆ ನುಗ್ಗಿ ಇಡೀ ಕೃಷಿಯನ್ನೇ ನಾಶಗೊಳಿಸುತ್ತಿದೆ. ಪ್ರತಿ ದಿನ ರಾತ್ರಿ ಗದ್ದೆ ಭಾಗದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ತೆರೆಗಳನ್ನು ತುಳಿದು ಧ್ವಂಸ ಮಾಡುತ್ತಿದೆ ಎಂದು ಸಮಸ್ಯೆ ವಿವರಿಸಿದ ಸಾವನ್, ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ ವಿವಿಧ ನೆಪಗಳನ್ನು ಒಡ್ಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ” ಎಂದು ಆಪಾದಿಸಿದ್ದಾರೆ.

“ಭತ್ತ ಕೃಷಿ ಕಟಾವಿಗೆ ಬಂದಿದ್ದು, ವನ್ಯ ಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ನೀಡಬೇಕಾಗಿರುವುದು ಅರಣ್ಯ ಇಲಾಖೆಯ ಹೊಣೆಗಾರಿಕೆಯಾಗಿದೆ. ಆದ್ದರಿಂದ ಗ್ರಾಮದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಹುಲಿಯ ಸೆರೆಗಾಗಿ ಬೋನನ್ನು ಅಳವಡಿಸಿ ಅರಣ್ಯ ಇಲಾಖೆ ಗ್ರಾಮದಲ್ಲಿ ಗಸ್ತು ನಡೆಸಬೇಕು. ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳನ್ನು ಕಾಡಿಗಟ್ಟಿ ಅವುಗಳು ನಾಡಿಗೆ ಬರದಂತೆ ಸೂಕ್ತ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಗ್ರಾಮಸ್ಥರ ಪರವಾಗಿ ಒತ್ತಾಯಿಸಿರುವ ಸಾವನ್, ಇನ್ನಾದರೂ ಅರಣ್ಯ ಇಲಾಖೆ ಸ್ಪಂದಿಸದಿದ್ದಲ್ಲಿ ಗ್ರಾಮದ ಮಹಿಳೆಯರು ಸೇರಿದಂತೆ ಸಾರ್ವಜನಿಕರೊಡಗೂಡಿ ಅರಣ್ಯ ಇಲಾಖೆಯ ಕಚೇರಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X