ಕೋಲಾರ | ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನದ ಕೊಡುಗೆ : ಎಂ.ಎಲ್.ಸಿ ಅನಿಲ್ ಕುಮಾರ್

Date:

ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ. ಆದರೆ ಎಲ್ಲಾ ಧರ್ಮಗಳಿಗಿಂತಲೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಹೇಳಿದರು.

- Advertisement -

ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆ ಗುರುತುಗಳನ್ನು ಅರಿತು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ. ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ. ದೇಶ ಪ್ರಸ್ತುತ ಶಾಂತಿ ಸೌಹಾರ್ಧತೆಯಿಂದ ಮುನ್ನೆಡೆಯಲು ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಕಾರಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
ಅನಿಲ್‌ 2

ಮೀಸಲಾತಿಯೇ ಇಲ್ಲದ ಸಂದರ್ಭದಲ್ಲಿ ಯಾರೂ ಓದದಷ್ಟು ಪದವಿಗಳನ್ನು ಅಂಬೇಡ್ಕರ್‌ ಓದಿದ್ದಾರೆ. ಆದರೆ ಪ್ರಸ್ತುತ ಮೀಸಲಾತಿಯಿದ್ದು, ಸಾಕಷ್ಟು ಅವಕಾಶಗಳಿವೆ. ಆದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ. ಸಾರ್ವಜನಿಕರು ಶಿಕ್ಷಣದ ಮಹತ್ವವನ್ನರಿತು ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್. ಎಲ್ಲಿ ಭ್ರಷ್ಟಾಚಾರ, ಅಸಮಾನತೆ, ಅನ್ಯಾಯ ಇದೆಯೋ, ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ. ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅನಾವರಣ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...