ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Date:

  • ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
  • ಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂ

ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬರ ಮಾರ್ಗಸೂಚಿಯೊಳಗೆ 62 ತಾಲ್ಲೂಕುಗಳನ್ನು ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್‌ಎಸ್‌ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಪ್ರಧಾನಿ ಭೇಟಿಗೆ ಸಮಯ ನಿಗದಿಪಡಿಸಲಿ

“ಕೇಂದ್ರ ಸರ್ಕಾರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನ ಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು, ಭೇಟಿಗೆ ಸಮಯ ನಿಗದಿಪಡಿಸಲಿ” ಎಂದು ಒತ್ತಾಯಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ

ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ, ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ” ಎಂದು ಕಿಡಿ ಕಾರಿದರು.

ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಅಸಾಧ್ಯ

ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಯಕೂಟದವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...