ಮಂಡ್ಯ | ಬಾಲ್ಯವಿವಾಹ ತಡೆಯಲು ಎಲ್ಲರೂ ಕೈಜೋಡಿಸಬೇಕು: ನ್ಯಾಯಾಧೀಶ ಓಂಕಾರಮೂರ್ತಿ

Date:

Advertisements

ಬಾಲ್ಯ ವಿವಾಹವು ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯ ವಿವಾಹದಂತಹ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧ ಸಂಘಟಿತ ಹೋರಾಟ ಮಾಡಿ, ಶ್ರೀಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕು. ಆ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ನಾಗರೀಕ ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕೆಆರ್ ಪೇಟೆ ಜೆಎಂಎಫ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಹೆಚ್ ಓಂಕಾರಮೂರ್ತಿ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯ ಕೆಪಿಎಸ್ ಶಾಲಾ ಆವರಣದಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಹೆಣ್ಣು ಮಕ್ಕಳು ಈ ರಾಷ್ಟ್ರದ ಶಕ್ತಿ. ದೇಶದ ಮುನ್ನಡೆಯಲ್ಲಿ ಹೆಣ್ಣುಮಕ್ಕಳ ಕೊಡುಗೆ ಅಪಾರವಾಗಿದೆ. ಆಟ ಪಾಠ ಮಾಡಿಕೊಂಡು ಸಂತೋಷದಿಂದ ಕಾಲ ಕಳೆಯಬೇಕಾದ ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿಯೇ ವಿವಾಹವೆಂಬ ಬಂಧನಕ್ಕೆ ಕೂಡಿ ಹಾಕಲಾಗುತ್ತದೆ. ಇದರಿಂದ, ಮಾನಸಿಕವಾಗಿ ಖಿನ್ನತೆಗೆ ಒಳಗಾಗುವ ಹೆಣ್ಣು ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲುವ ಜೊತೆಗೆ, ವಿವಾಹ ಬಂಧನದಲ್ಲಿ ಸಿಲುಕಿ ನರಳ ಬೇಕಾಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳಿಗೆ ಕನಿಷ್ಠ 18 ವರ್ಷ ತುಂಬುವ ಮೊದಲೇ ಮದುವೆ ಮಾಡಬಾರದು” ಎಂದು ಹೇಳಿದರು.

Advertisements

“ಹೆಣ್ಣು ಮಕ್ಕಳು ಮಾನಸಿಕವಾಗಿ, ಶಾರೀರಿಕವಾಗಿ ಸದೃಢರಾಗಿ, ಕನಿಷ್ಠ ಪದವಿ ಶಿಕ್ಷಣವನ್ನು ಪಡೆದು ಜ್ಞಾನವನ್ನು ಹೆಚ್ಚಿಸಿಕೊಳ್ಳುವವರೆಗೆ ವಿವಾಹ ಬಂಧನದಿಂದ ದೂರ ಇಡಬೇಕು. ಗಂಡು ಮಕ್ಕಳಿಗೆ ಕನಿಷ್ಠ 21 ವರ್ಷ, ಹೆಣ್ಣು ಮಕ್ಕಳಿಗೆ ಕನಿಷ್ಠ 18 ವರ್ಷ ತುಂಬುವವರೆಗೂ ವಿವಾಹವೆಂಬ ಪದವು ಅವರ ಬಳಿ ಸುಳಿಯದಂತೆ ತಂದೆ ತಾಯಿಗಳು ಹಾಗೂ ಪೋಷಕರು ಎಚ್ಚರ ವಹಿಸಬೇಕು” ಎಂದು ನ್ಯಾಯಾಧೀಶ ಓಂಕಾರ ಮೂರ್ತಿ ತಿಳಿಸಿದರು.

ಅಪರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಕೆ.ವಿ. ಅರ್ಪಿತಾ ಅವರು ಮಾತನಾಡಿ, “ಬಾಲ್ಯ ವಿವಾಹ, ವರದಕ್ಷಿಣೆ ಪದ್ಧತಿ ಮುಂತಾದ ಸಾಮಾಜಿಕ ಅನಿಷ್ಠಗಳನ್ನು ಸಮಾಜದಿಂದ ಸಂಪೂರ್ಣವಾಗಿ ತೊಳೆದು ಹಾಕಬೇಕು. ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ ಹೆಣ್ಣನ್ನು ಒಪ್ಪಿಕೊಳ್ಳುವ ನಾವು ಮಗಳಾಗಿ ಗೌರವದಿಂದ ಏಕೆ ನಡೆಸಿಕೊಳ್ಳಬಾರದು” ಎಂದು ಪ್ರಶ್ನಿಸಿದರು.

“ಹೆಣ್ಣು ಮಕ್ಕಳು ಕೂಡ ಪುರುಷರಿಗೆ ಸರಿ ಸಮಾನವಾಗಿ ವ್ಯಾಸಂಗವನ್ನು ಮಾಡಿ ಸರ್ಕಾರದ ವಿವಿಧ ಹುದ್ದೆಯನ್ನು ಅಲಂಕರಿಸಿ ನಾಗರೀಕ ಸಮಾಜ ಸೇರಿದಂತೆ ಇಡೀ ಕುಟುಂಬವನ್ನು ಮುನ್ನಡೆಸಲು ಅವಕಾಶ ಮಾಡಿಕೊಡಬೇಕು. ಹೆಣ್ಣು ಮನಸ್ಸು ಮಾಡಿ ನಿಂತರೆ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸಲು ಸಾಧ್ಯ. ಹೆಣ್ಣು ಮಕ್ಕಳ ಸಾಧನೆಗೆ ಪೋಷಕರು ಪ್ರೋತ್ಸಾಹ ನೀಡಿ ಅವಕಾಶ ಒದಗಿಸಿಕೊಡಬೇಕು. ಹೆಣ್ಣು ಮಕ್ಕಳು ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಸಹಕರಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X