ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

Date:

  • ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು
  • ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು ಅನುಭವಿಸಿದ್ದಾರೆ. ಈ ಸೋಲನ್ನು ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಪರೋಕ್ಷವಾಗಿ ಸಂಭ್ರಮಿಸಿ ವ್ಯಂಗ್ಯವಾಡಿದ್ದಾರೆ.

“ಸಿ.ಟಿ ರವಿ ನನ್ನನ್ನು ಬಿಜೆಪಿಯಿಂದ ಹೊರಗೆ ಕಳಿಸಿದ್ರು. ಆದರೆ, ಅವರೇ ಕ್ಷೇತ್ರವನ್ನು ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ. ಸಿ.ಟಿ ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕೊಂಡು ಹೋದ್ರು ಇನ್ಮುಂದೆ ಆಗಲ್ಲ. ನಿನ್ನೆಯಿಂದ ಅದು ವೀರಶೈವ ಲಿಂಗಾಯುತರ ಕ್ಷೇತ್ರ” ಎಂದು ಎಂ.ಪಿ ಕುಮಾರಸ್ವಾಮಿ ಹೇಳಿದ್ದಾರೆ.

“ಚಿಕ್ಕಮಗಳೂರಲ್ಲಿ ಒಕ್ಕಲಿಗರು ಇರೋದು ಆರೇ ಸಾವಿರ ಮತದಾರರು ಅಷ್ಟೆ. ಯಡಿಯೂರಪ್ಪ ಸ್ವಿಚ್ ಆಫ್ ಮಾಡಲಿಲ್ಲ. ಮಾಡಿದ್ರೆ ಬಿಜೆಪಿ 50 ಸೀಟ್ ಅಷ್ಟೆ ಬರ್ತಿತ್ತು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಿ.ಟಿ ರವಿ ನನ್ನನ್ನು ಬಿಟ್ಟಿದ್ದಕ್ಕೆ ಐದು ಕ್ಷೇತ್ರ ಹೋಗುತ್ತೆ ಅಂತ ಸಾಮಾನ್ಯ ಜನ ಹೇಳ್ತಾರೆ. ಜೆಡಿಎಸ್‌ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ಸೋತೆ. ಎಲ್ಲ ಸರಿ ಮಾಡಿಕೊಂಡು ಚುನಾವಣೆ ಮಾಡೋದು ಆಗ್ತಿರಲಿಲ್ಲ, ಕಷ್ಟವಾಗಿತ್ತು. ಮುಂದೆ ಎಲ್ಲ ಸರಿ ಮಾಡಿಕೊಂಡು ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಾಡುತ್ತೇವೆ” ಎಂದ್ದಿದ್ದಾರೆ.

“ಮೂಡಿಗೆರೆಯಲ್ಲಿ ಬಿಜೆಪಿಗೆ ಜೀವ ತುಂಬಿದವನೇ ನಾನು” ಎಂದು ಎಂ.ಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ : ದಸಂಸ

ಎಂ ಪಿ ಕುಮಾರಸ್ವಾಮಿ ಅವರು ಕಳೆದ ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಡಾನೆ ಸಮಸ್ಯೆ ಕಾರಣಕ್ಕೆ ಕ್ಷೇತ್ರದ ಜನರಿಂದ ತೀವ್ರ ವಿರೋಧ ಎದುರಿಸಿದ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್‌ ನೀಡಲಿಲ್ಲ. ಬಳಿಕ ಬಿಜೆಪಿ ರಾಜೀನಾಮೆ ನೀಡಿ ಜೆಡಿಎಸ್‌ ಅಭ್ಯರ್ಥಿಯಾಗಿ ಮೂಡಿಗೆರೆ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ, ಮತದಾರರು ಅವರು ಕೈ ಹಿಡಿಯಲಿಲ್ಲ.

ಕಳೆದ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಬಿಜೆಪಿ, ಒಂದು ಕ್ಷೇತ್ರದಲ್ಲಿ ಮಾತ್ರವೇ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿಯ ಚುನಾವಣೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದು ಸಿ ಟಿ ರವಿ ಅವರಿಗೆ ಭಾರಿ ಮುಖ ಭಂಗ ಉಂಟುಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ...

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್...

ದಕ್ಷಿಣ ಕನ್ನಡ | ಬಿಜೆಪಿ ಸೋಲಿಸಿ ಜಾತ್ಯತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್ಐ ಕರೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ ಎರಡು ಅವಧಿಯಿಂದ...