ಬಳ್ಳಾರಿ | ಜಾತಿನಿಂದಕ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ಆನಂದ್ ಕುಮಾರ್ ಆಗ್ರಹ

Date:

Advertisements

ಜಾತಿ ನಿಂದಕ, ಅತ್ಯಾಚಾರ ಆರೋಪ ಹೊತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮುನಿರತ್ನನನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಆನಂದ್ ಕುಮಾರ್ ಕುಡುತಿನಿ ಇವರು ಆಗ್ರಹಿಸಿದ್ದಾರೆ.

ಕಳೆದ ಒಂದು ವಾರದಿಂದ ಹಾಲಿ ಶಾಸಕ ಮುನಿರತ್ನನ ಬಗ್ಗೆ ಮೊದಲು ಸುಲಿಗೆ ಪ್ರಕರಣ, ನಂತರ ಜಾತಿ ನಿಂದನೆ ಪ್ರಕರಣ ನಂತರ ರೇಪ್ ಪ್ರಕರಣ ನಂತರ ಏಡ್ಸ್ ನಂತಹ ಮಹಾಮಾರಿ ಸೋಂಕು ಹರಡುವ ಪ್ರಕರಣಗಳು ಹೀಗೆ ಇನ್ನೂ ವಿಚಿತ್ರ ರೀತಿಯಲ್ಲಿ ಪ್ರಕರಣಗಳು ಈ ವ್ಯಕ್ತಿಯ ವಿರುದ್ಧ ಬೆಳಕಿಗೆ ಬಂದಿವೆ.

ಈಗಾಗಲೇ ಧಾಖಲಾದ ಪ್ರಕರಣಗಳಲ್ಲಿ ಜೈಲು ಸೇರಿರುವುದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ಮುನಿರತ್ನ ಅವರು ರಾಜಕಾರಣದಲ್ಲಿ ಮುಂದುವರೆಯಲಿಕ್ಕೆ ಲಾಯಕ್ಕಿಲ್ಲ. ಇಂತಹ ವ್ಯಕ್ತಿ ಶಾಸಕ ಸ್ಥಾನದಲ್ಲಿ ಮುಂದುವರೆದಲ್ಲಿ ಆ ಕ್ಷೇತ್ರದ ಜನಗಳಿಗೆ ಅಪಾಯಕಾರಿ ಆಗುವುದಂತೂ ಸತ್ಯ ಎಂದು ಕುಡುತಿನಿ ತಿಳಿಸಿದ್ದಾರೆ.

Advertisements

ಮುನಿರತ್ನರಂತಹ ಕೊಳಕು ರಾಜಕಾರಣಿಗಳು ರಾಜಕೀಯದಲ್ಲಿ ಮುಂದುವರೆಯಬಾರದು. ಅವರಿಂದ ರಾಜಕಾರಣಕ್ಕೆ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರಿಗೂ ಅಪತ್ತು ಅನಾಹುತ, ಅಭದ್ರತೆ,ಅಸುರಕ್ಷಿತತೆ ಕಾಡುತ್ತಿದೆ. ಹಾಗಾಗಿಯೇ ಶಾಸಕ ಸ್ಥಾನದಲ್ಲಿ ಮುನಿರತ್ನ ಮುಂದುವರೆಯಬಾರದು ಎಂಬುದು ಬಳ್ಳಾರಿ ಜಿಲ್ಲಾ ಪ್ರಜಾ ಪರಿವರ್ತನಾ ವೇದಿಕೆಯ ಆಗ್ರಹ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರಾಜಕಾರಣವನ್ನು ಶುಚಿಗೊಳಿಸಬೇಕಾದ ಅವಶ್ಯಕತೆ ಇದೆ. ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಜಾ ಪರಿವರ್ತನೆ ವೇದಿಕೆಯ ಹಲವಾರು ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X