ಚಿಕ್ಕಬಳ್ಳಾಪುರ | ಕೋಲು ಬೀಸಿದ ಶಿಕ್ಷಕಿ; ಕಣ್ಣಿಗೆ ಬಿದ್ದು ಸಂಪೂರ್ಣ ದೃಷ್ಟಿ ಕಳೆದುಕೊಂಡ ಬಾಲಕ

Date:

Advertisements

ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಕೊಪಗೊಂಡ ಶಿಕ್ಷಕಿ ವಿದ್ಯಾರ್ಥಿಗಳ ಕಡೆಗೆ ಕೋಲು ಎಸೆದಿದ್ದು, ಕೋಲು ಬಾಲಕನ ಕಣ್ಣಿಗೆ ಬಿದ್ದು, ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಘಟನೆ ಕಳೆದ ವರ್ಷ ಮಾರ್ಚ್ 6 ರಂದು ಘಟನೆ ನಡೆದಿತ್ತು. 1ನೇ ತರಗತಿ ವಿದ್ಯಾರ್ಥಿ ಯಶ್ವಂತ್ ಎಂಬಾತನ ಬಲಗಣ್ಣಿಗೆ ಪೆಟ್ಟಾಗಿತ್ತು. ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ, ಈಗ ಆತನ‌ ಬಲ ಕಣ್ಣಿನ ದೃಷ್ಟಿ ಸಂಪೂರ್ಣವಾಗಿ ಕಳೆದುಹೋಗಿದೆ.

ಆರಂಭದಲ್ಲಿ, ಗಾಯವಾಗಿದೆ. ಚಿಕಿತ್ಸೆ ಕೊಡಿಸಿದರೆ ಗುಣವಾಗುತ್ತದೆ ಎಂದು ಪೋಷಕರು ಭಾವಿಸಿದ್ದರು. ಆದರೆ, ಕೆಲ ದಿನಗಳ ಹಿಂದೆ, ಬಾಲಕನ ಕಣ್ಣಿನ ಆರೋಗ್ಯ ಹದಗೆಟ್ಟಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಲನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನ ಕಣ್ಣನ್ನು ಪರೀಕ್ಷಿಸಿದ್ದ ವೈದ್ಯರು ಎರಡು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದರು. ಆದರೂ, ಬಾಲಕನ ಸ್ಥಿತಿ ಸುಧಾರಿಸಲಿಲ್ಲ. ಈಗ, ಆತ ತನ್ನ ಬಲಗಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.

Advertisements

ಭಾನುವಾರ, ಬಾಲಕನ ಪೋಷಕರು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಶಿಕ್ಷಕಿ, ತಾಲೂಕು ಬ್ಲಾಕ್ ಶಿಕ್ಷಣ ಅಧಿಕಾರಿ ಸೇರಿದಂತೆ ಐದು ಮಂದಿ ವಿರುದ್ಧ ಪೊಲೀಸರು‌ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X