ಬೆಂಗಳೂರು | ಫೆ.10ರಂದು ರೈತ ನಾಯಕ ಪ್ರೊ. ಎಂಡಿಎನ್ ನೆನಪಿನಲ್ಲಿ ಬೃಹತ್ ರೈತ ಸಮಾವೇಶ

Date:

Advertisements

ರೈತ ನಾಯಕ ಪ್ರೋ. ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ವಿವಿಧ ಜಾತಿ, ಸಮುದಾಯಗಳಲ್ಲಿರವು ರೈತ ಸಮುದಾಯವನ್ನು ಸಮಾಜವಾದಿ ಚಿಂತನೆಗಳ ಕರೆತಂದು, ಜಾತಿಗಿಂತ ವರ್ಗ ದೊಡ್ಡದು ಎಂಬ ಪ್ರಜ್ಞೆ ಮೂಡಿಸಿದವರು ನಂಜುಂಡಸ್ವಾಮಿ ಅವರು. ರೈತಸಂಘವನ್ನು ಪರಿಣಾಮಕಾರಿ ಮತ್ತು ಪ್ರಭಾವ ಬೀರುವ ಚಳುವಳಿಯಾಗಿ ಅವರು ಕಟ್ಟಿದ್ದಾರೆ. ಅವರನ್ನು ಸ್ಮರಿಸುವುದು ನಾಡಿದ ರೈತರ ಕರ್ತವ್ಯ” ಎಂದು ಹೇಳಿದರು.

“ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಂದು ರೈತರ ನಾನಾ ಬೇಡಿಕೆಗಳಿರುವ 38 ಪುಟಗಳ ಹಕ್ಕೊತ್ತಾಯವನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುತ್ತದೆ. ರೈತ ಚಿಂತನೆಯಿರುವ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಮಹಾದೇವಪ್ಪ, ಶಾಸಕ ಹಾಗೂ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್ ಪಾಟೀಲ್, ಮೇಲಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

Advertisements

“2013ರಲ್ಲಿ ಕಾಂಗ್ರೆಸ್‌ ಸರ್ಕಾರವೇ ರಚಿಸಿದ್ದ ಕೃಷಿ ಬೆಲೆ ಆಯೋಗವನ್ನು ಮತ್ತಷ್ಟು ಬಲವರ್ಧನೆ ಮಾಡಬೇಕು. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಹಣ ನೀಡುವ ಬದಲು ರೈತರು ಬೆಳೆಯುತ್ತಿರುವ ಜೋಳ, ರಾಗಿ, ತೊಗರಿ ಬೇಳೆ ಹಾಗೂ ಎಣ್ಣೆ ವಿತರಣೆ ಮಾಡಬೇಕು. ಇದರಿಂದ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುತ್ತದೆ. ರೈತರಿಗೆ ಅನುಕೂಲವಾಗುತ್ತದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಸಮಾವೇಶಕ್ಕೆ ಮುಖ್ಯಮಂತ್ರಿಯನ್ನು ಕರೆಸುವುದು ಸಂಘಟನೆಯ ಮೇಲೆ ರಾಜಕೀಯ ಪ್ರಭಾವ ಬೀರುವುದಿಲ್ಲವೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಪ್ರತಿಭಟನಾ ಸಮಾವೇಶವಲ್ಲ. ನಂಜುಂಡಸ್ವಾಮಿ ಅವರನ್ನು ಸ್ಮರಿಸುವ ಸಮಾವೇಶ. ಸಿದ್ದರಾಮಯ್ಯ ಅವರು ನಂಜುಂಡಸ್ವಾಮಿ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳುತ್ತಾರೆ. ಹೀಗಾಗಿ, ಅವರು ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯುತ್ತದೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸಂಘಟನೆ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಹೋರಾಟಕ್ಕೆ ಮಣಿದ ನ್ಯಾಷನಲ್ ಕಾಲೇಜು;ದಲಿತ ಪ್ರಾಧ್ಯಾಪಕರ ಹಿಂಬಡ್ತಿ ಆದೇಶ ವಾಪಸ್‌

ರೈತ ಸಂಘದ ಕಾರ್ಯಾಧ್ಯಕ್ಷ ವಿರಸಂಗಯ್ಯ ಮಾತನಾಡಿ, “ಕರ್ನಾಟಕ ಹಳ್ಳಿಗಳ ರಾಜ್ಯ. ಬೆರಳೆಣಿಕೆಯ ನಗರಗಳನ್ನು ಅಭಿವೃದ್ಧಿ ಮಾಡಿದರೆ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳು ಉಳಿದರೆ, ಮಾತ್ರ ದೇಶ ಉಳಿಯುತ್ತದೆ. ಇಂತಹ ಕಾಲ ದಿಕ್ಕು ತಪ್ಪಿದೆ. ಗ್ರಾಮೀಣ ಭಾಗದ ಯುವಕರಿಗೆ ವಿವಾಹಕ್ಕೆ ಹೆಣ್ಣು ಸಿಗದೇ ಇರುವುದು ಸಮಾಜದಲ್ಲಿ ಸೂತಕದ ಛಾಯೆಯನ್ನು ಸೂಚಿಸುತ್ತದೆ. ರೈತ ಯುವಜನರನ್ನು ಪ್ರೋತ್ಸಾಹಿಸುವ, ಅವರಿಗೆ ಕನಿಷ್ಠ ಆದಾಯ ಖಾತ್ರಿಯಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲ್ ಪಾಪೇಗೌಡ, ರವಿಕರಣ್ ಪುಣಚ, ಶ್ರೀಶೈಲ ನಾಯಕ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X