ದಾವಣಗೆರೆ | ಕೃಷಿಗಾಗಿ ಪ್ರತ್ಯೇಕವಾದ ಕೇಂದ್ರ ಬಜೆಟ್ ಮಂಡಿಸಲು ರೈತ, ಕಾರ್ಮಿಕ ಮುಖಂಡರ ಆಗ್ರಹ

Date:

ಕೃಷಿಗಾಗಿ ಪ್ರತ್ಯೇಕವಾದ ಕೇಂದ್ರ ಬಜೆಟ್, ಕೃಷಿ ಕಾರ್ಪೊರೇಟೀಕರಣ ನಿಲ್ಲಿಸುವುದು ಸೇರಿದಂತೆ ಇನ್ನಿತರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳ ಸಂಯುಕ್ತ ಹೋರಾಟ ಸಮಿತಿ ದಾವಣಗೆರೆ ಘಟಕದ ವತಿಯಿಂದ ಸಂಸದರಿಗೆ ಮನವಿ ಸಲ್ಲಿಸಲಾಯಿತು.

- Advertisement -

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ ಮುಖಂಡರು, ರೈತ ಹೋರಾಟ ಪ್ರಬಲವಾಗಿರುವ ಸುಮಾರು 39 ಕ್ಷೇತ್ರಗಳಲ್ಲಿ ಆಳುವ ಮೈತ್ರಿಕೂಟ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಅಲ್ಲಿ ಹೀನಾಯವಾಗಿ ಸೋತಿದೆ. ಇದು ಅವರ ಪರಿಸ್ಥಿತಿಯನ್ನು ಮತ್ತು ಅವರ ರೈತ ವಿರೋಧಿ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಸಕಾಲವಾಗಿದ್ದು, ಇನ್ನು ಮುಂದಾದರು ಆಳುವ ಸರ್ಕಾರಗಳು ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಮತ್ತು ರೈತರನ್ನು ಪ್ರಸ್ತುತ ಬಿಕಟ್ಟಿನಿಂದ ಹೊರ ತರಲು ಕ್ರಮ ಕೈಗೊಳ್ಳಬೇಕು ಮತ್ತು ರೈತ ವಿರೋಧಿ ಕಾಯ್ದೆಗಳನ್ನು ರಚಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ದಾವಣಗೆರೆ 1 2

ಈ ಹಿಂದೆ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರಚಿಸಿದ ಪರಿಣಾಮ ಸ್ವತಂತ್ರವಾಗಿ ಸರ್ಕಾರ ರಚಿಸಿದ್ದ ಮೈತ್ರಿಕೂಟ ಈಗ ಬೇರೆ ಪಕ್ಷಗಳ ಸಹಾಯದಿಂದ ಆಡಳಿತ ಕೇಂದ್ರದಲ್ಲಿ ಆಡಳಿತ ನಡೆಸುವ ಸ್ಥಿತಿ ಉಂಟಾಗಿದೆ. ಇದನ್ನು ಅರಿತು ಇನ್ನು ಮುಂದಾದರೂ ರೈತ ಸ್ನೇಹಿ ಕಾಯ್ದೆಗಳನ್ನು ರಚಿಸಿ ರೈತರ ಹಿತ ಕಾಪಾಡುವ ಕಾರ್ಯವನ್ನು ಮಾಡಬೇಕಿದೆ. ಅದಕ್ಕಾಗಿ ರೈತರ ಹಕ್ಕೊತ್ತಾಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಮನವಿಯಲ್ಲಿ ಉಲ್ಲೇಖೀಸಲಾಯಿತು.

ಮನವಿ ಸಲ್ಲಿಸುವ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹೊನ್ನೂರ್ ಮುನಿಯಪ್ಪ, ಜಿಲ್ಲಾಧ್ಯಕ್ಷರಾದ ಮರುಳಸಿದ್ದಯ್ಯ, ಬುಳ್ಳಾಪುರ ಹನುಮಂತಪ್ಪ, ಹೊನ್ನೂರು ರಾಜು, ಕಾರ್ಮಿಕ ಸಂಘಟನೆಗಳ ಮುಖಂಡರಾದ ಉಮೇಶ್ ಅವರೆಗೆರೆ, ಚಂದ್ರು, ಮಧು ತೊಗಲೇರಿ, ಶೇಖರಪ್ಪ ಜನಶಕ್ತಿಯ ಸತೀಶ್ ಅರವಿಂದ್, ಇದರ ಮುಖಂಡರು ಹಾಜರಿದ್ದರು.

ರೈತರ ಹಕ್ಕೊತ್ತಾಯಗಳು

  1. ಎಲ್ಲಾ ಬೆಳೆಗಳ C2+50% ದರದಲ್ಲಿ ಕಾಯ್ದೆಬದ್ಧ ಕನಿಷ್ಠ ಬೆಂಬಲ ಬೆಲೆ ಮತ್ತು ಸಂಪೂರ್ಣ ಉತ್ಪನ್ನದ ಸಂಗ್ರಹಣೆಯ ಖಾತರಿ ಜಾರಿಗೊಳಿಸಬೇಕು.
  2. ರೈತರು ಮತ್ತು ಕೃಷಿ ಕಾರ್ಮಿಕರನ್ನು ಸಾಲದ ಶೂಲದಿಂದ, ಆತ್ಮಹತ್ಯೆಗಳಿಂದ ಹಾಗೂ ಸಂಕಷ್ಟದ ವಲಸೆಯಿಂದ ರಕ್ಷಿಸಲು ಸಮಗ್ರ ‘ಸಾಲ ಮನ್ನಾ’ ಜಾರಿ ಮಾಡಬೇಕು.
  3. ವಿದ್ಯುಚ್ಛಕ್ತಿ ವಲಯದ ಖಾಸಗೀಕರಣ ಮತ್ತು ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್‌ಗಳ ಪ್ರಸ್ತಾಪ ಕೈಬಿಡಬೇಕು.
  4. ರಸಗೊಬ್ಬರ, ಕ್ರಿಮಿನಾಶಕಗಳು, ವಿದ್ಯುತ್, ನೀರಾವರಿಯ ಯಂತ್ರೋಪಕರಣಗಳು, ಬಿಡಿ ಭಾಗಗಳು, ಟ್ರಾಕ್ಟರ್‌ಗಳಂತಹ ಕೃಷಿ ಒಳಸುರಿಗಳ ಮೇಲೆ ಜಿಎಸ್‌ಟಿ ಹಾಕಬಾರದು. ಕೃಷಿ ಒಳಸುರಿಗಳಿಗೆ ಸಬ್ಸಿಡಿ ಪುನಃ ಜಾರಿ ಮಾಡಬೇಕು. ಸರ್ಕಾರಿ ಯೋಜನೆಗಳ ಲಾಭವನ್ನು ಪಾಲು ಬೆಳೆಗಾರರು ಮತ್ತು ಗೇಣಿದಾರರಿಗೂ ವಿಸ್ತರಿಸಬೇಕು.
  5. ಎಲ್ಲ ಕೃಷಿ ಮತ್ತು ಪಶುಸಂಗೋಪನೆ ವ್ಯವಸ್ಥೆಗಳಿಗೂ ಸಾರ್ವಜನಿಕ ವಲಯದಲ್ಲಿ ಸಂಪೂರ್ಣ ವಿಮೆ ಸೌಲಭ್ಯ ಕಲ್ಪಿಸಬೇಕು. ಕಾರ್ಪೊರೇಟ್ ಪರವಾದ PMFBY ಯೋಜನೆಯನ್ನು ರದ್ದುಪಡಿಸಬೇಕು.
  6. ಆಹಾರ ಉತ್ಪಾದಕರಾದ ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ ಹಕ್ಕನ್ನು ಮಾನ್ಯ ಮಾಡಬೇಕು.
  7. ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆ 2013 ನ್ನು ಎರಡು ವರ್ಷಕ್ಕೊಮ್ಮೆ ದರವನ್ನು ಪರಿಷ್ಕರಣೆ ಮಾಡುವುದನ್ನು ಕಡ್ಡಾಯಗೊಳಿಸಿ ಕಾರ್ಯಗತಗೊಳಿಸಬೇಕು. ಸಾರ್ವಜನಿಕ ಮತ್ತು ಖಾಸಗಿ ವಲಯದ ಯೋಜನೆಗಳೆರಡಕ್ಕಾಗಿಯೂ ಕಡಿಮೆ ಸರ್ಕಲ್ ದರದಲ್ಲಿ ಸ್ವಾಧೀನಪಡಿಸಿಕೊಂಡ ಎಲ್ಲಾ ಭೂಮಿಗೂ ಪರಿಹಾರ ನೀಡಬೇಕು. ಪರಿಹಾರ ಮತ್ತು ಪುನರ್ವಸತಿಗಳನ್ನು ನೀಡದೆ ಯಾವುದೇ ಭೂ ಸ್ವಾಧೀನ ಮಾಡಕೂಡದು. ಮುಂಚಿತವಾಗಿ ಪುನರ್ವಸತಿ ಕಲ್ಪಿಸದೆ ಯಾವುದೇ ಸ್ಲಂ ಮತ್ತು ಅಂತಹ ವಸತಿ ಪ್ರದೇಶಗಳನ್ನು ನೆಲಸಮ ಮಾಡಬಾರದು. ‘ಬುಲ್ಡೋಜರ್ ಆಡಳಿತ’ವನ್ನು ಕೊನೆಗೊಳಿಸಬೇಕು. ಪೂರ್ಣ ಪರಿಹಾರ ನೀಡದೆ ಯಾವುದೇ ಕೃಷಿ ಭೂಮಿಯ ಮೇಲೆ ಹೈ ವೋಲ್ವೇಜ್ ವಿದ್ಯುತ್ ಮಾರ್ಗಗಳನ್ನು ಬಲವಂತವಾಗಿ ನಿರ್ಮಿಸಬಾರದು.
  8. ಅರಣ್ಯ ಹಕ್ಕು ಕಾಯ್ದೆ (FRA) ಮತ್ತು ಪಂಚಾಯತ್ (ಶೆಡ್ಯೂಲ್ಡ್ ಏರಿಯಗಳಿಗೆ ವಿಸ್ತರಣೆ) ಕಾಯ್ದೆ (PESA) ಇವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
  9. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು, ಮನುಷ್ಯ ಜೀವಹಾನಿಗೆ 1 ಕೋಟಿ ರೂ. ಹಾಗೂ ಬೆಳೆ ಮತ್ತು ಸಾಕುಪ್ರಾಣಿಗಳ ನಷ್ಟಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು.
  10. ಭಾರತವನ್ನೊಂದು ಪೊಲೀಸ್ ಪ್ರಭುತ್ವವನ್ನಾಗಿಸಿ ಭಿನ್ನಾಭಿಪ್ರಾಯವನ್ನು ಮತ್ತು ಜನತೆಯ ಪ್ರತಿಭಟನೆಗಳನ್ನು ಹತ್ತಿಕ್ಕಲೆಂದೇ, ಸಂಸತ್ತಿನಲ್ಲಿ ಯಾವುದೇ ಪ್ರಜಾತಾಂತ್ರಿಕ ಪ್ರಕ್ರಿಯೆಗೆ ಒಳಪಡಿಸದೆ ಸಿಪಿಸಿ ಮತ್ತು ಸಿಆರ್ ಪಿಸಿ (ಭಾರತೀಯ ದಂಡ ಸಂಹಿತೆ ಮತ್ತು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ) ಕಾಯ್ದೆಗಳನ್ನು ಬದಲಾಯಿಸಿ, ಜನತೆಯ ಮೇಲೆ ಹೇರಿರುವ 3 ಕ್ರಿಮಿನಲ್ ಕಾಯ್ದೆಗಳನ್ನು ರದ್ದು ಮಾಡಬೇಕು.
  11. 736 ರೈತ ಹುತಾತ್ಮರ ಸ್ಮರಣೆಗಾಗಿ ಸಿಂಘು/ಚಿಕ್ರಿ ಗಡಿಯಲ್ಲಿ ಸೂಕ್ತವಾದ ಹುತಾತ್ಮ ಸ್ಮಾರಕವನ್ನು ನಿರ್ಮಿಸಬೇಕು. ಲಖಿಂಪುರ್ ಬೀರಿಯ ಹುತಾತ್ಮರನ್ನೂ ಒಳಗೊಂಡಂತೆ ಚಾರಿತ್ರಿಕ ರೈತ ಹೋರಾಟದ ಎಲ್ಲಾ ಹುತಾತ್ಮರ ಕುಟುಂಬಗಳಿಗೂ ಸೂಕ್ತವಾದ ಪರಿಹಾರವನ್ನು ನೀಡಬೇಕು. ರೈತ ಹೋರಾಟದ ಸಂಬಂಧ ಹಾಕಲಾಗಿರುವ ಎಲ್ಲಾ ಕೇಸುಗಳನ್ನೂ ಹಿಂತೆಗೆಯಬೇಕು.
  12. ಕಾರ್ಮಿಕರು, ರೈತರು ಮತ್ತು ಎಲ್ಲಾ ದುಡಿವ ಜನತೆಯ ನಡುವೆ ಸಂಪತ್ತಿನ ತರ್ಕಸಮ್ಮತ ಮತ್ತು ಸಮಾನ ಹಂಚಿಕೆಗೆ ಬೇಕಾದ ಹಣಕಾಸಿನ ಸಂಪನ್ಮೂಲವನ್ನು ಕಂಡುಕೊಳ್ಳುವುದಕ್ಕಾಗಿ ಅತಿ ಶ್ರೀಮಂತರಿಗೆ ತೆರಿಗೆ ಹಾಕಬೇಕು; ಕಾರ್ಪೊರೇಟ್ ತೆರಿಗೆಯನ್ನು ಹೆಚ್ಚಿಸಬೇಕು: ಸಂಪತ್ತಿನ ತೆರಿಗೆ ಮತ್ತು ಉತ್ತರಾಧಿಕಾರ ತೆರಿಗೆಯನ್ನು ಪುನಃ ಜಾರಿಗೆ ತರಬೇಕು.
  13. ಕೃಷಿಯ ಕಾರ್ಪೊರೇಟೀಕರಣ ಕೂಡದು. ಕೃಷಿ ಉತ್ಪಾದನೆ, ವ್ಯಾಪಾರ ಮತ್ತು ಆಹಾರ ಸಂಸ್ಕರಣೆಯಲ್ಲಿ ಎಂಎನ್ಸಿಗಳಿಗೆ ಪ್ರವೇಶ ನೀಡಕೂಡದು. ಮುಕ್ತ ವ್ಯಾಪಾರ ಒಡಂಬಡಿಕೆಗಳನ್ನು (ಫ್ರೀ ಟ್ರೇಡ್ ಅಗ್ರೀಮೆಂಟ್ FTA) ಮಾಡಿಕೊಳ್ಳಬಾರದು. ಭಾರತವು ಕೃಷಿಗೆ ಸಂಬಂಧಿಸಿದ WTO ಒಪ್ಪಂದದಿಂದ ಹೊರಬರಬೇಕು.
  14. ಜಿಎಸ್‌ಟಿ ಕಾಯ್ದೆಗೆ ತಿದ್ದುಪಡಿ ಮಾಡಿ, ಭಾರತೀಯ ಸಂವಿಧಾನದಲ್ಲಿ ಪ್ರತಿಷ್ಠಾಪಿಸಿರುವ ‘ಬಲಿಷ್ಠ ರಾಜ್ಯಗಳು: ಬಲಿಷ್ಠ ಭಾರತ ಒಕ್ಕೂಟ’ ಎಂಬ ಒಕ್ಕೂಟ ತತ್ವಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರಗಳ ತೆರಿಗೆ ಹಕ್ಕನ್ನು ಪುನ‌ರ್ ಸ್ಥಾಪಿಸಬೇಕು.
  15. ಸಹಕಾರ ಕ್ಷೇತ್ರವು ರಾಜ್ಯ ವಿಷಯವೆಂಬ ಸಾಂವಿಧಾನಿಕ ನಿಯಮಾವಳಿಯನ್ನು ಎತ್ತಿಹಿಡಿಯಬೇಕು ಹಾಗೂ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯನ್ನು ರದ್ದುಗೊಳಿಸಬೇಕು.
  16. ಜನತೆಯ ಜೀವನೋಪಾಯ ಮತ್ತು ಪ್ರಕೃತಿಯ ರಕ್ಷಣೆಗಾಗಿ ಭೂಮಿ, ನೀರು, ಆರಣ್ಯಗಳು ಹಾಗೂ ಖನಿಜಗಳಂತಹ ನೈಸರ್ಗಿಕ ಸಂಪನ್ಮೂಲಗಳ ಕಾರ್ಪೊರೇಟ್ ಹತೋಟಿ ಮತ್ತು ಸರಕೀಕರಣವನ್ನು ಕೊನೆಗೊಳಿಸಬೇಕು. ಕೃಷಿಯ ರಕ್ಷಣೆ, ಮಳೆ ನೀರಿನ ವೈಜ್ಞಾನಿಕ ಸಂರಕ್ಷಣೆ-ಬಳಕೆಯ (ಮಳೆನೀರು ಕೊಯ್ದು) ಅಭಿವೃದ್ಧಿ, ಜಲಾನಯನ ಪ್ರದೇಶಗಳ ಆಯೋಜನೆ (watershed planning) ಹಾಗೂ ಜಲಮೂಲಗಳ ರಕ್ಷಣೆ ಇವುಗಳಿಗಾಗಿ ಹವಾಮಾನ ಬದಲಾವಣೆಯ ವಿಚಾರವನ್ನು ಸೂಕ್ತವಾಗಿ ನಿರ್ವಹಿಸಬೇಕು
  17. ಮನರೇಗಾ ಕೂಲಿಯನ್ನು 600 ರೂಪಾಯಿಗಳಿಗೆ ಹೆಚ್ಚಿಸಿ ಯೋಚನೆಯನ್ನು ಜಲಾನಯನ ಅಭಿವೃದ್ಧಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಚಟುವಟಿಕೆಗಳಿಗೆ ವಿಸ್ತರಿಸಬೇಕು.
  18. ನಾಲ್ಕು ಕಾರ್ಮಿಕ ಬಿಲ್ ಗಳನ್ನು ರದ್ದುಗೊಳಿಸಬೇಕು ಮತ್ತು ಸಾರ್ವಜನಿಕ ವಲಯದ ಖಾಸಗಿಕರಣ ಮತ್ತು ಕಾಂಟಾಕ್ಟ್ ಪದ್ಧತಿಯನ್ನು ನಿಲ್ಲಿಸಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....