ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

Date:

Advertisements

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಕಬ್ಬು ಬೆಳೆದು ಕಾರ್ಖಾನೆಗಳಿಗೆ ನೀಡಿದರೆ, ಕಬ್ಬು ಖರೀದಿಸುವ ಕಾರ್ಖಾನೆ ಮಾಲೀಕರು ಸಮಯಕ್ಕೆ ಸರಿಯಾಗಿ ಹಣ ನೀಡುತ್ತಿಲ್ಲ. ಹೀಗಾಗಿ, ಕಬ್ಬು ಬೆಳಗಾರರು ನಾನಾ ರೀತಿಯ ಸಂಕಷ್ಟ ಎದುರಿಸುತ್ತಿದ್ದಾರೆ. ಹಲವು ರೈತರು ಕಾರ್ಖಾನೆಗಳ ಸಹವಾಸವೇ ಬೇಡವೆಂದು ನಿರ್ಧರಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಲವಾರು ರೈತರು ಕಾರ್ಖಾನೆಗಳಿಗೆ ಕಬ್ಬು ನೀಡದೆ, ಆಲೆಮನೆಗಳಿಗೆ ಕಬ್ಬು ಒದಗಿಸಲು ಮುಂದಾಗಿದ್ದಾರೆ. ಮಂಡ್ಯಕ್ಕೆ ಭೇಟಿ ನೀಡಿದ್ದ ಹಾನಗಲ್‌ ತಾಲೂಕಿನ ರೈತರ ತಂಡವೊಂದು ತಾಲೂಕಿನಲ್ಲಿ ಆಲೆಮನೆಗಳನ್ನು ತೆರೆದಿದೆ. ಶೀಗಿಹಳ್ಳಿ, ಸಿಂಗಾಪುರ, ಆಡೂರು ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆಲೆಮನೆಗಳನ್ನು ತೆರೆದು, ಬೆಲ್ಲ ತಯಾರಿಕೆಯಲ್ಲಿ ತೊಡಗಿದ್ದಾರೆ.

ಆಲೆ ಮನೆಗಳಲ್ಲಿ ತಯಾರಿಸಿ ಬೆಲ್ಲವನ್ನು ಹಾವೇರಿ ಸೇರಿದಂತೆ ನಾನಾ ಭಾಗಗಳಲ್ಲಿ ವರ್ತಕರಿಗೆ ಮಾರಾಟ ಮಾಡಲಾಗುತ್ತದೆ. ಕಬ್ಬ ಅರೆದ ಕೆಲವೇ ದಿನಗಳಲ್ಲಿ ಹಣ ದೊರೆಯುತ್ತದೆ. ಉತ್ತಮ ಆದಾಯವೂ ಇದೆ ಎಂದು ರೈತರು ಹೇಳುತ್ತಿದ್ದಾರೆ.

Advertisements

ಸಕ್ಕರೆ ಕಾರ್ಖಾನೆಗಳಲ್ಲಿ ಟನ್‌ ಕಬ್ಬಿಗೆ 3,100 ರೂ. ದೊರೆಯುತ್ತದೆ. ಅದರಲ್ಲಿ, ಕಟಾವಿಗೆ 1,000 ರೂ. ನೀಡಬೇಕು. ಉಳಿಯುವುದು 2,100 ರೂ. ಮಾತ್ರ. ಅದು ಕಬ್ಬು ಬೆಳೆಗೆ ಹಾಕಿದ್ದ ಬಂಡವಾಳಕ್ಕೂ ಕಡಿಮೆ ಇರುತ್ತದೆ. ಆದರೆ, ಆಲೆಮನೆಗಳಲ್ಲಿ ಕೊಂಚ ಹೆಚ್ಚು ಆದಾಯ ಸಿಗುತ್ತದೆ. ಆಲೆಮನೆಯಲ್ಲಿ ತಯಾರಾಗುವ ಬೆಲ್ಲಕ್ಕೆ 10 ಕೆ.ಜಿಗೆ 340 ರೂ. ಸಿಗುತ್ತದೆ. ಒಂದು ಟನ್ ಕಬ್ಬಿನಿಂದ 90 ರಿಂದ 100 ಕೆ.ಜಿ ಬೆಲ್ಲ ಉತ್ಪಾದನೆಯಾಗುತ್ತದೆ. ಇದರಿಂದ ಸ್ವಲ್ಪ ಲಾಭವಿದೆ ಎಂದು ರೈತರು ಹೇಳಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X