ರಾಯಚೂರು | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತರು ಧರಣಿ

Date:

Advertisements

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼರೈತರು ಕೃಷಿ ಪಂಪ್ ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ವೆಚ್ಚ ಭರಿಸಲು ಸೂಚಿಸಿರುವ ಆದೇಶ ಹಿಂಪಡೆಯಬೇಕು. 2 ರಿಂದ 3 ಲಕ್ಷ ಹಣವನ್ನು ರೈತರು ಭರಿಸಲು ಸಾಧ್ಯವಾಗುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼರಾಜ್ಯದಲ್ಲಿ ಕಳೆದ ವರ್ಷ ಏಪ್ರಿಲ್‌ನಿಂದ ಈವರಗೆ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ಅತಿಹೆಚ್ಚು ಯುವ ರೈತರೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡಲೇ ಸರ್ಕಾರ ರೈತರಲ್ಲಿ ಆತ್ಮಸೈರ್ಯ ಹೆಚ್ಚಿಸಲು ಮುಂದಾಗಬೇಕು. ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಿ ರಾಜ್ಯ ಸರ್ಕಾರವೇ ಬೆಂಬಲ ಬೆಲೆ ನಿಗದಿಪಡಿಸಬೇಕು. ಬ್ಯಾಂಕ್‌ಗಳು ಬರಗಾಲದಲ್ಲೂ ಒತ್ತಾಯದಿಂದ ಸಾಲ ವಸೂಲಾತಿಗೆ ಮಾಡುತ್ತಿರುವುದು ತಡೆಯಬೇಕುʼ ಎಂದು ಒತ್ತಾಯಿಸಿದರು.

Advertisements

ʼಎಲ್ಲ ಬೆಳೆಗಳಿಗೆ ಫಸಲ್ ಭೀಮಾ ಯೋಜನೆಯಡಿ ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಿ ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು, ಫಸಲ್ ಭೀಮಾ, ಪಹಣಿ , ಪಕ್ಕ ಪೋಡಿ, ಹದ್ದುಬಸ್ತು ಶುಲ್ಕ ಹೆಚ್ಚಳ ಹಿಂಪಡೆಯಬೇಕು. ಖರೀದಿ ಕೇಂದ್ರದ ಮೂಲಕ ರೈತರಿಂದ ಜೋಳ, ರಾಗಿ ಖರೀದಿಸಿ ಬಾಕಿ ಉಳಿಸಿಕೊಂಡ ರೈತರ ಹಣ ಪಾವತಿಸಬೇಕುʼ ಎಂದರು.

ಅರಣ್ಯ ಭೂಮಿ ಸಾಗುವಳಿ ರೈತರಿಗೆ ಪಟ್ಟಾ ಭೂಮಿ ನೀಡುವುದು, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇದ ಕಾಯ್ದೆ ಹಿಂಪಡೆಯಬೇಕು. ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತ ನೀರಾವರಿ ತಡೆದು ಕೆಳಭಾಗದ ರೈತರ ಜಮೀನಿಗೆ ನೀರು ಒದಗಿಸಬೇಕು. ನಾರಾಯಣಪುರ ಬಲದಂಡೆ ಕಾಲುವೆ 18 ವಿತರಣಾ ಕಾಲುವೆ ದುರಸ್ತಿ ಅರಬರೆಯಾಗಿದ್ದು ಕಳಪೆಯಾಗಿದೆ. ಕೂಡಲೇ ಗುಣಮಟ್ಟ ಕಾಮಗಾರಿ ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರೈತ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ವೆಂಕಪ್ಪ ಕಾರಬಾರಿ, ಮಲ್ಲಣ್ಣದಿನ್ನಿ, ಬಸನಗೌಡ ಮಲ್ಲಿಗೆಮಡಗು, ಲಿಂಗಾರೆಡ್ಡಿ ಪಾಟೀಲ್, ಗೋವಿಂದ ನಾಯಕ, ಮಲ್ಲಮ್ಮ ಹುನಕುಂಟಿ, ಸಿದ್ದಯ್ಯಸ್ವಾಮಿ ಮಾನವಿ, ಹುಚ್ಚಪೀರಸಾಬ ಮಲ್ದಕಲ್, ಉಮಣ್ಣ ಮಲದಕಲ್, ದೇವರಾಜ ನಾಯಕ, ಬ್ರಹ್ಮಯ್ಯ ಆಚಾರಿ, ರವಿಕುಮಾರ ಗಬ್ಬೂರು, ಸೂಗರೆಡ್ಡಿ ಕುನ್ನಿ, ಕಲ್ಲೂರಾಯ, ಬಯ್ಯಾರೆಡ್ಡಿ, ಶಿವರಾಜ, ಚನ್ನಬಸವ, ವೀರೇಶ ಗವಿಗಟ್ಟ, ಶಂಕ್ರಪ್ಪಗೌಡ, ರಮೇಶ ಅಬಕಾರಿ ಸುಂಕೇಶ್ವರಹಾಳ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X